ಜಮ್ಮು ಮತ್ತು ಕಾಶ್ಮೀರದಲ್ಲಿ ಅಂಬಾನಿ ಮತ್ತು ಆರ್ಎಸ್ಎಸ್ ಜೊತೆ ಸಂಪರ್ಕ ಹೊಂದಿರುವ ವ್ಯಕ್ತಿಗಳಿಗೆ ಸೇರಿದ ಕಡತಗಳನ್ನು ವಿಲೇವಾರಿ ಮಾಡಲು ತಮಗೆ ₹ 300 ಕೋಟಿಯ ಆಮಿಷ ಒಡ್ಡಲಾಗಿತ್ತು ಎಂಬ ಜಮ್ಮು ಮತ್ತು ಕಾಶ್ಮೀರದ ಮಾಜಿ ಗವರ್ನರ್ ಹೇಳಿಕೆಯನ್ನು ಜೆಡಿಎಸ್ ಮುಖಂಡ ಎಚ್.ಡಿ.ಕುಮಾರಸ್ವಾಮಿ ಉಲ್ಲೇಖಿಸಿದ್ದಾರೆ. ಜಮ್ಮು ಮತ್ತು ಕಾಶ್ಮೀರವು ಕೇಂದ್ರಾಡಳಿತಕ್ಕೆ ಒಳಪಟ್ಟ ಮೇಲೆ ಈ ಪ್ರಕರಣ ನಡೆದಿದ್ದಲ್ಲಿ,ಲೆಫ್ಟಿನೆಂಟ್ ಗವರ್ನರ್ ಆಗಿದ್ದವರು ಅಂತಹವರ ವಿರುದ್ಧ ಸೂಕ್ತ ಕಾನೂನು ಕ್ರಮ ಜರುಗಿಸಲು ಯಾವ ಅಡಚಣೆಯೂ ಇರಲಿಲ್ಲ.ರಾಜ್ಯಪಾಲರಾಗಿದ್ದವರೇ ಆರೋಪಿಸಲಿ ಅಥವಾ ಒಬ್ಬ ಸಾಮಾನ್ಯ ಪ್ರಜೆಯೇ ಆರೋಪಿಸಲಿ, ಅಂತಹ ಆರೋಪಕ್ಕೆ ಸಾಕ್ಷ್ಯಾಧಾರಗಳು ಇಲ್ಲದಿದ್ದರೆ ಅದರಲ್ಲಿ ಯಾವ ಹುರುಳೂ ಇರುವುದಿಲ್ಲ.