ವರ್ಷಗಳ ಹಿಂದೆ ಉತ್ತರ ಭಾರತದವರೊಬ್ಬರು, ‘ದಕ್ಷಿಣ ಭಾರತದಲ್ಲಿ ಯಾವ ಕರೆನ್ಸಿ ಬಳಸುತ್ತಾರೆ’ ಎಂದು ಕೇಳಿದ್ದರಂತೆ. ಉತ್ತರದವರು ದಕ್ಷಿಣದವರನ್ನು ಬೇರೆ ರಾಷ್ಟ್ರದವರಂತೆ ಕಾಣುತ್ತಾರೆ ಎನ್ನುವ ಆಪಾದನೆ ಕೇಳಿ ಬರುತ್ತಿರುವಾಗ ಇಂತಹ ಘಟನೆ ನಡೆದಿರುವುದು ದುರ್ದೈವ. ಈ ವಿಷಯವನ್ನು ದೊಡ್ಡದು ಮಾಡದೇ ಕಾಂಗ್ರೆಸ್ ಮುಖಂಡ ಪಿ.ಚಿದಂಬರಂ, ಭದ್ರತಾ ಸಿಬ್ಬಂದಿಗೆ ಇಂಗ್ಲಿಷ್ ಮತ್ತು ಹಿಂದಿ ಎರಡೂ ಭಾಷೆಗಳನ್ನು ಕಲಿಸಬೇಕು ಎಂದು ಪ್ರತಿಕ್ರಿಯಿಸಿ ಮುತ್ಸದ್ದಿತನ ಮೆರೆದಿರುವುದು ಶ್ಲಾಘನೀಯ.