ಮಹಿಳೆಯರ ರಕ್ಷಣೆಗಾಗಿ ಕೇಂದ್ರ ಸರ್ಕಾರ ಸ್ಥಾಪಿಸಿರುವ ನಿರ್ಭಯಾ ನಿಧಿಯಲ್ಲಿ ಶೇ 80ರಷ್ಟು ಹಣವನ್ನು ರಾಜ್ಯ ಸರ್ಕಾರಗಳು ಬಳಸಿಕೊಂಡೇ ಇಲ್ಲ ಎಂಬ ವಿಷಯ ಬಯಲಾಗಿದೆ. ಇಂತಹ ಪ್ರಕರಣಗಳಲ್ಲಿ ತ್ವರಿತಗತಿಯಲ್ಲಿ ನ್ಯಾಯದಾನ ಸಿಗುವಂತಹ ವ್ಯವಸ್ಥೆ ಆಗಬೇಕು. ಜೊತೆಗೆ, ಮಕ್ಕಳಲ್ಲಿ ಚಿಕ್ಕ ವಯಸ್ಸಿನಿಂದಲೇ ಹೆಣ್ಣುಮಕ್ಕಳ ಬಗೆಗೆ ಗೌರವ ಭಾವನೆ ಬೆಳೆಸಿ, ಲಿಂಗ ತಾರತಮ್ಯ ಹೋಗಲಾಡಿಸಬೇಕು. ಮನಃಸ್ಥಿತಿ ಬದಲಾದಾಗ ಮಾತ್ರ ಸಮಾಜ ಬದಲಾಗುತ್ತದೆ.