‘ಇತಿಹಾಸದಿಂದ ಪಾಠ ಕಲಿಯಲಿಲ್ಲ ಎಂಬುದೇ ಅದರಿಂದ ಕಲಿತ ಪಾಠ’ ಎಂಬ ನಾಣ್ನುಡಿಯು ಕರ್ನಾಟಕದಲ್ಲಿ ನಿಜವಾಗುತ್ತಿರುವಂತೆ ಕಾಣುತ್ತಿದೆ. ರಾಜ್ಯದಲ್ಲಿ 2006ರಿಂದ 2011ರವರೆಗೆ ನಡೆದ ಕಬ್ಬಿಣದ ಅದಿರು ಗಣಿಗಾರಿಕೆ ಅಕ್ರಮಗಳ ಬಗ್ಗೆ, ಅಧಿಕಾರಿಗಳ ಭ್ರಷ್ಟಾಚಾರದ ಬಗ್ಗೆ, ಅದರಿಂದ ಬಳ್ಳಾರಿ, ಚಿತ್ರದುರ್ಗ ಮತ್ತು ತುಮಕೂರು ಜಿಲ್ಲೆಗಳಲ್ಲಿನ ಪರಿಸರಕ್ಕೆ, ಕೃಷಿಗೆ, ಜನರ ಆರೋಗ್ಯಕ್ಕೆ ಉಂಟಾದ ಅಪಾಯಗಳ ಬಗ್ಗೆ ಕರ್ನಾಟಕ ಲೋಕಾಯುಕ್ತರ ವರದಿಯಿದೆ. ಸುಪ್ರೀಂ ಕೋರ್ಟ್ ನೇಮಿಸಿದ್ದ ಸಿ.ಇ.ಸಿ. ವರದಿಯಿದೆ. ಪ್ರಸ್ತುತ ಮುಖ್ಯಮಂತ್ರಿ ಅಂದು ಅದರ ವಿವಾದದಲ್ಲಿ ಸಿಲುಕಿ ರಾಜೀನಾಮೆ ನೀಡಿದ್ದರು.