ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಲೆಕ್ಕಕ್ಕೇ ಸಿಗದ ₹35 ಸಾವರಿ ಕೋಟಿ: ನಿಷ್ಪಕ್ಷಪಾತ ತನಿಖೆ ನಡೆಯಬೇಕು

Last Updated 7 ಡಿಸೆಂಬರ್ 2018, 19:46 IST
ಅಕ್ಷರ ಗಾತ್ರ

ಸಿದ್ದರಾಮಯ್ಯ ಅವರು ಮುಖ್ಯಮಂತ್ರಿಯಾಗಿದ್ದ ಅವಧಿಯಲ್ಲಿ ಮಾಡಿರುವ 35 ಸಾವಿರ ಕೋಟಿ ರೂಪಾಯಿಗಳ ವೆಚ್ಚವು ಲೆಕ್ಕಕ್ಕೇ ಸಿಗುತ್ತಿಲ್ಲ ಎಂದು ಬಿಜೆಪಿಯವರು ಆರೋಪ ಮಾಡಿರುವುದು ವರದಿಯಾಗಿದೆ (ಪ್ರ.ವಾ., ಡಿ.7).

‘ದಕ್ಷ, ಪ್ರಾಮಾಣಿಕ ಮತ್ತು ಪಾರದರ್ಶಕ ಆಡಳಿತವನ್ನು ಕೊಡುತ್ತೇನೆ’ ಎಂದು ಜನರಿಗೆ ಭರವಸೆ ನೀಡಿರುವ ಹಾಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಈ ಆರೋಪದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಜನರ ತೆರಿಗೆಯ ಹಣವು ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ಲೆಕ್ಕಕ್ಕೆ ಸಿಗದೆ ಹರಿದುಹೋಗುತ್ತಿರುವುದು ಖಂಡನೀಯ. ಜನರಿಗೆ ಕುಡಿಯಲು ನೀರಿಲ್ಲ, ಇರಲು ಮನೆ ಇಲ್ಲ. ಇಂಥ ಸ್ಥಿತಿಯಲ್ಲಿ ಬೊಕ್ಕಸದ ಹಣ ಪೋಲಾಗುವುದು ಸರಿಯಲ್ಲ.

–ವಿಠಲ ಆರ್. ಯಂಕಂಚಿ, ಬಮ್ಮನಜೋಗಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT