‘ದಕ್ಷ, ಪ್ರಾಮಾಣಿಕ ಮತ್ತು ಪಾರದರ್ಶಕ ಆಡಳಿತವನ್ನು ಕೊಡುತ್ತೇನೆ’ ಎಂದು ಜನರಿಗೆ ಭರವಸೆ ನೀಡಿರುವ ಹಾಲಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರು ಈ ಆರೋಪದ ಬಗ್ಗೆ ನಿಷ್ಪಕ್ಷಪಾತ ತನಿಖೆ ನಡೆಸಬೇಕು. ಜನರ ತೆರಿಗೆಯ ಹಣವು ಅಭಿವೃದ್ಧಿ ಕಾರ್ಯಗಳ ಹೆಸರಿನಲ್ಲಿ ಲೆಕ್ಕಕ್ಕೆ ಸಿಗದೆ ಹರಿದುಹೋಗುತ್ತಿರುವುದು ಖಂಡನೀಯ. ಜನರಿಗೆ ಕುಡಿಯಲು ನೀರಿಲ್ಲ, ಇರಲು ಮನೆ ಇಲ್ಲ. ಇಂಥ ಸ್ಥಿತಿಯಲ್ಲಿ ಬೊಕ್ಕಸದ ಹಣ ಪೋಲಾಗುವುದು ಸರಿಯಲ್ಲ.