ಅಂಚೆ ಇಲಾಖೆಯ ಹಿತಶತ್ರುಗಳು
ಭಾರತದಲ್ಲಿ ಪ್ರಾಮಾಣಿಕತೆಗೆ ಹೆಸರಾದ ಕಚೇರಿಯೆಂದರೆ ಅದು ಅಂಚೆ ಕಚೇರಿ ಎಂದು ಸಣ್ಣ ಮಕ್ಕಳೂ ಹೇಳುತ್ತಿದ್ದರು. ಆದರೆ ಈಗ ಮಾದಕವಸ್ತು ಕಳ್ಳಸಾಗಣೆ ಜಾಲದಲ್ಲಿ ಸಿಕ್ಕಿಬಿದ್ದಿರುವ ಇಲಾಖೆಯ ನಾಲ್ವರು ಸಿಬ್ಬಂದಿಯ ಹೀನ ಕೃತ್ಯದಿಂದಾಗಿ ಇಡೀ ಇಲಾಖೆಯೇ ತಲೆತಗ್ಗಿಸುವಂತಾಗಿದೆ. ಈ ವ್ಯಕ್ತಿಗಳು ಸಂಸ್ಥೆಯಲ್ಲಿ ಇದ್ದುಕೊಂಡೇ ಸಂಸ್ಥೆಯನ್ನು ಉಪಯೋಗಿಸಿಕೊಂಡು ಇಂತಹ ದುಷ್ಕೃತ್ಯ ಎಸಗಿರುವುದು ಅಕ್ಷಮ್ಯ. ಇಂತಹ ಹಿತಶತ್ರುಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು.
-ಬಾಲಕೃಷ್ಣ ಎಂ.ಆರ್., ಬೆಂಗಳೂರು
ಕೇಂದ್ರ ಬಜೆಟ್ 2021 ಪೂರ್ಣ ಮಾಹಿತಿ ಇಲ್ಲಿದೆ
ತಾಜಾ ಸುದ್ದಿಗಳಿಗಾಗಿ ಪ್ರಜಾವಾಣಿ ಆ್ಯಪ್ ಡೌನ್ಲೋಡ್ ಮಾಡಿಕೊಳ್ಳಿ: ಆಂಡ್ರಾಯ್ಡ್ ಆ್ಯಪ್ | ಐಒಎಸ್ ಆ್ಯಪ್
ಪ್ರಜಾವಾಣಿ ಫೇಸ್ಬುಕ್ ಪುಟವನ್ನುಫಾಲೋ ಮಾಡಿ.