ಭಾರತದಲ್ಲಿ ಪ್ರಾಮಾಣಿಕತೆಗೆ ಹೆಸರಾದ ಕಚೇರಿಯೆಂದರೆ ಅದು ಅಂಚೆ ಕಚೇರಿ ಎಂದು ಸಣ್ಣ ಮಕ್ಕಳೂ ಹೇಳುತ್ತಿದ್ದರು. ಆದರೆ ಈಗ ಮಾದಕವಸ್ತು ಕಳ್ಳಸಾಗಣೆ ಜಾಲದಲ್ಲಿ ಸಿಕ್ಕಿಬಿದ್ದಿರುವ ಇಲಾಖೆಯ ನಾಲ್ವರು ಸಿಬ್ಬಂದಿಯ ಹೀನ ಕೃತ್ಯದಿಂದಾಗಿ ಇಡೀ ಇಲಾಖೆಯೇ ತಲೆತಗ್ಗಿಸುವಂತಾಗಿದೆ. ಈ ವ್ಯಕ್ತಿಗಳು ಸಂಸ್ಥೆಯಲ್ಲಿ ಇದ್ದುಕೊಂಡೇ ಸಂಸ್ಥೆಯನ್ನು ಉಪಯೋಗಿಸಿಕೊಂಡು ಇಂತಹ ದುಷ್ಕೃತ್ಯ ಎಸಗಿರುವುದು ಅಕ್ಷಮ್ಯ. ಇಂತಹ ಹಿತಶತ್ರುಗಳಿಗೆ ಕಠಿಣ ಶಿಕ್ಷೆ ವಿಧಿಸಬೇಕು.