ಅಂಚೆ ಸೇವೆಗೆ ಸಂಬಂಧಿಸಿದ ದೂರು, ಕುಂದುಕೊರತೆ ಬಗೆಹರಿಸಲು ಅಂಚೆ ಇಲಾಖೆಯು ಚಿತ್ರದುರ್ಗದಲ್ಲಿ ಆಯೋಜಿಸಿದ್ದ ಅಂಚೆ ಅದಾಲತ್ಗೆ ಒಬ್ಬ ಗ್ರಾಹಕರೂ ಹಾಜರಾಗಲಿಲ್ಲ ಎಂದು ವರದಿಯಾಗಿದೆ (ಪ್ರ.ವಾ., ಡಿ. 3). ನಾನು ಒಂದು ಬಾರಿ ಅಂಚೆ ಕಚೇರಿಗೆ ಹೋಗಿ ಅಂಚೆ ಎಂಐಎಸ್ನಲ್ಲಿ ಹಣ ತೊಡಗಿಸಲು ಚೆಕ್ ನೀಡಿದಾಗ, ಏನೇನೋ ಅಸಂಬದ್ಧ ಕಾರಣ ಹೇಳಿ ಸ್ವೀಕರಿಸಲಿಲ್ಲ. ಅದೇ ಹಣವನ್ನು ಬೇರೆ ಬ್ಯಾಂಕ್ನಲ್ಲಿ ತೊಡಗಿಸಿದೆ. ಇದೊಂದು ಸಣ್ಣ ಉದಾಹರಣೆ ಅಷ್ಟೆ.