ಇಂದಿರಾ ಕ್ಯಾಂಟೀನ್ ಯೋಜನೆಯು ಅತ್ಯಂತ ಕಡಿಮೆ ದರದಲ್ಲಿ ತಿಂಡಿ, ಊಟ ಮಾಡಲುಎಷ್ಟೋ ಮಂದಿಗೆ ಅನುಕೂಲಕರವಾಗಿದೆ. ಪ್ರತಿದಿನ ಬೆಳಿಗ್ಗೆ ಒಂದೊಂದು ಬಗೆಯ ತಿಂಡಿ, ಮಧ್ಯಾಹ್ನ ಮತ್ತು ರಾತ್ರಿ ವೇಳೆ ಅನ್ನ, ಸಾಂಬಾರ್ ಕೊಡುವ ವ್ಯವಸ್ಥೆ ಇದೆ. ಮುಂದಿನ ದಿನಗಳಲ್ಲಿ ‘ಆರೋಗ್ಯಮಿತ್ರ’ ರಾಗಿ ಮುದ್ದೆಯನ್ನೂ ನೀಡಲು ಬಿಬಿಎಂಪಿ ನಿರ್ಧರಿಸಿರುವುದು ಸ್ವಾಗತಾರ್ಹ.