ಈ ಯೋಜನೆಯ ಅಡಿಯಲ್ಲಿ ನಾನು ಒಂದು ಸರ್ಕಾರಿ ಪ್ರೌಢಶಾಲೆಯಲ್ಲಿ ಕನ್ನಡ ಭಾಷೆ, ಸಾಹಿತ್ಯ, ನೈತಿಕ ಮೌಲ್ಯಗಳ ಕುರಿತು ಎರಡು ವರ್ಷ ತರಗತಿ ತೆಗೆದುಕೊಂಡಿದ್ದೆ. ಈ ಕೋವಿಡ್ ಸಂದರ್ಭದಲ್ಲಿ ರಾಜ್ಯ ಸರ್ಕಾರ ಇದೇ ಯೋಜನೆಯನ್ನು ಕೆಲವು ಮಾರ್ಪಾಟುಗಳೊಂದಿಗೆ ಜಾರಿಗೆ ತಂದಿದ್ದರೆ, ಹಳ್ಳಿಯ ಮಕ್ಕಳ ಶಿಕ್ಷಣ ಅಡೆತಡೆಯಿಲ್ಲದೆ ಮುಂದುವರಿಯುವ ಎಲ್ಲ ಸಾಧ್ಯತೆಯೂ ಇತ್ತು.
-ಸಿ.ಚಿಕ್ಕತಿಮ್ಮಯ್ಯ ಹಂದನಕೆರೆ,ಬೆಂಗಳೂರು