ಪ್ರಧಾನಿ ನರೇಂದ್ರ ಮೋದಿ ಅವರು ತಮ್ಮ 75ನೆಯ ಮನ್ ಕಿ ಬಾತ್ನಲ್ಲಿ ‘ಕೃಷಿಗೆ ಆಧುನಿಕತೆಯ ಅಗತ್ಯವಿದೆ’ ಎಂದು ಒತ್ತಿ ಹೇಳಿದ್ದಾರೆ (ಪ್ರ.ವಾ., ಮಾರ್ಚ್ 29). ಇದರ ಜೊತೆಗೆ ಅವರು ಕೃಷಿ ಕ್ಷೇತ್ರದಲ್ಲಿ ಉದ್ಯೋಗಅವಕಾಶಗಳನ್ನು ಸೃಷ್ಟಿಸಲು, ರೈತರ ಆದಾಯವನ್ನು ವೃದ್ಧಿಸಲು ಸಾಂಪ್ರದಾಯಿಕ ಕೃಷಿ ಪದ್ಧತಿಗಳ ಜೊತೆಗೆ ಹೊಸ ಪರ್ಯಾಯಗಳು, ಆವಿಷ್ಕಾರಗಳನ್ನು ಅಳವಡಿಸಿಕೊಳ್ಳುವುದು ಮುಖ್ಯ ಎಂದೂ ಕರೆ ನೀಡಿದ್ದಾರೆ.