ನಷ್ಟದಲ್ಲಿರುವ ರಾಜ್ಯ ರಸ್ತೆ ಸಾರಿಗೆ ನಿಗಮಗಳ ನೌಕರರಿಗೆ ಒಂದು ವರ್ಷ ವೇತನರಹಿತ ರಜೆ ನೀಡಲು ಚಿಂತನೆ ನಡೆದಿದೆ. ಕೊರೊನಾ ಸೋಂಕಿನ ವಿರುದ್ಧದ ಹೋರಾಟದಲ್ಲಿ ನಿರತರಾಗಿರುವ ಆಶಾ ಕಾರ್ಯಕರ್ತೆಯರು ಆರ್ಥಿಕ ಸೌಲಭ್ಯಕ್ಕಾಗಿ ಆಗ್ರಹಿಸುತ್ತಿದ್ದಾರೆ. ಹೀಗೆ ವಿವಿಧ ವಲಯಗಳ ಜನರು ಅನೇಕ ಜ್ವಲಂತ ಸಮಸ್ಯೆಗಳು ಹಾಗೂ ಆರ್ಥಿಕ ಸಂಕಷ್ಟಗಳ ಸುಳಿಗೆ ಸಿಲುಕಿ ಸಂಕಷ್ಟದಲ್ಲಿರುವಾಗ, ಸರ್ಕಾರ ಇಂತಹ ನಿರ್ಧಾರ ತೆಗೆದುಕೊಂಡಿರುವುದು ಒಪ್ಪುವಂತಹ ವಿಚಾರವಲ್ಲ. ಆಳುವ ಸರ್ಕಾರಕ್ಕೆ ಕಣ್ಣು, ಕಿವಿಯಷ್ಟೇ ಅಲ್ಲ, ಹೃದಯವಂತಿಕೆಯೂ ಇದ್ದರೆ ಮಾತ್ರ ಜನರ ತುರ್ತು ಅಗತ್ಯಗಳು ಅರ್ಥವಾಗುತ್ತವೆ. ವರಮಾನ ಖೋತಾ ಮತ್ತು ಈಗಿನ ದುಗುಡದ ಸ್ಥಿತಿ ಅರಿತು ಸರ್ಕಾರ ನೈಜ ಸಮಸ್ಯೆಗಳಿಗೆ ಸ್ಪಂದಿಸಲಿ.