ಭಾರತೀಯ ಬಾಹ್ಯಾಕಾಶ ಸಂಶೋಧನಾ ಸಂಸ್ಥೆಯ (ಇಸ್ರೊ) 2023ರ ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತ್ಗೆ ಸ್ಥಳಾಂತರಿಸುವ ಪ್ರಸ್ತಾವ ಕೈಬಿಡುವಂತೆ ಒತ್ತಾಯಿಸಿ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅವರು ಪ್ರಧಾನಿ ನರೇಂದ್ರ ಮೋದಿ ಮತ್ತು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿರುವುದು (ಪ್ರ.ವಾ., ನ. 29) ಸ್ವಾಗತಾರ್ಹ ನಡೆ. ಏಕೆಂದರೆ ರಾಜ್ಯದ ರಾಜಧಾನಿ ಬೆಂಗಳೂರಿನಲ್ಲಿ ಇಸ್ರೊದ ಕೇಂದ್ರ ಕಚೇರಿಯಿದೆ. ಅಲ್ಲದೆ ರಾಜ್ಯದಲ್ಲಿ ರಕ್ಷಣಾ ಸಂಶೋಧನೆ ಮತ್ತು ಅಭಿವೃದ್ಧಿ ಸಂಸ್ಥೆ (ಡಿಆರ್ಡಿಒ), ಭಾರತೀಯ ವಿಜ್ಞಾನ ಸಂಸ್ಥೆಯಂತಹ (ಐಐಎಸ್ಸಿ) ರಾಷ್ಟ್ರ ಮಟ್ಟದ ಸರ್ಕಾರಿ ಸಂಸ್ಥೆಗಳಿವೆ. ಈ ಕಾರಣಕ್ಕೆ ಇಡೀ ಜಗತ್ತು ಇಂದು ರಾಜ್ಯದತ್ತ ನೋಡುವಂತೆ ಆಗಿದೆ. ಇನ್ನೊಂದೆಡೆ, ಜಗತ್ತಿನ ಸಾಫ್ಟ್ವೇರ್ ಕ್ಷೇತ್ರದ ಪ್ರಸಿದ್ಧ ಕಂಪನಿಗಳು ಸೇರಿದಂತೆ ನೂರಾರು ಕಂಪನಿಗಳು ಬೆಂಗಳೂರಿನಲ್ಲಿ ಬೀಡುಬಿಟ್ಟಿವೆ. ಹೀಗಿರುವಾಗ ಇಸ್ರೊದ ಉದ್ದೇಶಿತ ಮಾನವಸಹಿತ ಗಗನಯಾನ ಯೋಜನೆಯನ್ನು ಬೆಂಗಳೂರಿನಿಂದ ಗುಜರಾತ್ಗೆ ಸ್ಥಳಾಂತರಿಸುವುದು ಎಷ್ಟರಮಟ್ಟಿಗೆ ಸರಿ?