ಹಣ, ಆಸ್ತಿಪಾಸ್ತಿ ವ್ಯವಹಾರಕ್ಕೆ ಸಂಬಂಧಿಸಿದ ಎಲ್ಲ ದಾಖಲೆಗಳು ಸರಿಯಾಗಿದ್ದರೆ ಯಾರೂ ಯಾರಿಗೂ ಹೆದರ ಬೇಕಾದ ಅವಶ್ಯಕತೆ ಇರದು. ಯಾರೇ ಆಗಿರಲಿ, ಯಾವುದೇ ಪಕ್ಷದವರಾಗಿರಲಿ ಕಾನೂನನ್ನು ಎಲ್ಲರೂ ಗೌರವಿಸಬೇಕು. ಐ.ಟಿ., ಇ.ಡಿ. ದಾಳಿ ಪ್ರತಿಭಟಿಸಿ ಬೀದಿಗಿಳಿದುಸಾರ್ವಜನಿಕ ಆಸ್ತಿಪಾಸ್ತಿಗೆ ನಷ್ಟ ಉಂಟು ಮಾಡುವುದು, ಬಂದ್ಗೆ ಕರೆ ನೀಡಿ ಜನರಿಗೆ ತೊಂದರೆ ಕೊಡುವುದು ಎಷ್ಟು ಸರಿ? ಜನ ಎಲ್ಲಿಯವರೆಗೆ ಪ್ರಜ್ಞಾವಂತರಾಗುವುದಿಲ್ಲವೋ ಅಲ್ಲಿಯವರೆಗೂ ರಾಜಕೀಯ ವ್ಯವಸ್ಥೆ ಸರಿಯಾಗುವುದಿಲ್ಲ.