ಲೇಖಕ ಭಗವಾನ್ ಅವರ ಮುಖಕ್ಕೆ ಮಸಿ ಬಳಿದ ವಕೀಲೆಯ ಕೃತ್ಯ ತಮ್ಮ ವಕೀಲಿ ವೃತ್ತಿಗೇ ಕಳಂಕ ತರುವಂತಿತ್ತು. ಇದರ ತರುವಾಯ, ಮಂಗಳೂರಿನ ಬಿಜೆಪಿ ಮುಖಂಡರೊಬ್ಬರು ಅವಹೇಳನಕಾರಿ ಹೇಳಿಕೆಯೊಂದನ್ನು ನೀಡಿದ್ದು, ಅವರ ಮುಖಕ್ಕೆ ಮಸಿ ಬಳಿದವರಿಗೆ ಒಂದು ಲಕ್ಷ ರೂಪಾಯಿ ಬಹುಮಾನ ನೀಡುವುದಾಗಿ ಸ್ಥಳೀಯ ಕಾಂಗ್ರೆಸ್ ನಾಯಕಿಯೊಬ್ಬರು ಫೇಸ್ಬುಕ್ನಲ್ಲಿ ಘೋಷಿಸಿದ್ದಾರೆ. ಇದನ್ನೆಲ್ಲ ನೋಡಿದರೆ, ವಿದ್ಯಾವಂತ ನಾಗರಿಕರು ಎನಿಸಿಕೊಂಡವರೇ ಅನಾಗರಿಕವಾದ ರೀತಿಯಲ್ಲಿ ಸಮಾಜಕ್ಕೆ ಕೆಟ್ಟ ಸಂದೇಶಗಳನ್ನು ನೀಡುತ್ತಿದ್ದಾರೆ ಎನಿಸುತ್ತದೆ.