ಮಕ್ಕಳ ಹಕ್ಕಿಗಾಗಿ ನಿರಂತರವಾಗಿ ಹೋರಾಡುತ್ತಾ ಬಂದಿರುವ, ನೊಬೆಲ್ ಪ್ರಶಸ್ತಿ ಪುರಸ್ಕೃತ ಕೈಲಾಶ್ ಸತ್ಯಾರ್ಥಿಯವರು ಮಕ್ಕಳ ಹಕ್ಕುಗಳ ಬಗ್ಗೆ ರಾಜಕೀಯ ನೇತಾರರು ನಿರ್ಲಕ್ಷ್ಯ ತೋರುತ್ತಿರುವ ಕುರಿತು ಇತ್ತೀಚೆಗೆ ತೀವ್ರ ಕಳವಳ ವ್ಯಕ್ತಪಡಿಸಿದ್ದಾರೆ.ದೇಶದಲ್ಲಿ ಜಾನುವಾರುಗಳಿಗಿಂತ ಅಗ್ಗದ ಬೆಲೆಯಲ್ಲಿ ಮಕ್ಕಳ ಮಾರಾಟ ನಡೆಯುತ್ತಿದ್ದರೂ ಚಳಿಗಾಲದ ಅಧಿವೇಶನದಲ್ಲಿ ಜನಪ್ರತಿನಿಧಿಗಳು ರಾಜ್ಯಸಭೆಯಲ್ಲಿ ಮಕ್ಕಳ ಕಳ್ಳಸಾಗಣೆ ತಡೆ ಮಸೂದೆ ಬಗ್ಗೆ ಚರ್ಚಿಸಲು ವಿಫಲರಾಗಿದ್ದಾರೆ ಎಂದು ತೀವ್ರವಾಗಿ ಖಂಡಿಸಿದ್ದಾರೆ.