ಬೆಂಗಳೂರಿನಲ್ಲಿ ಬಹುರಾಷ್ಟ್ರೀಯ ಕಂಪನಿಗಳು ಪ್ರಾರಂಭವಾದ ಮೇಲೆ, ಮಾಲ್ಗಳು ತಲೆಯೆತ್ತಿದ ಮೇಲೆ ಹಾಗೂ ಮೆಟ್ರೊ ಸಂಚಾರ ಪ್ರಾರಂಭವಾದ ಮೇಲೆ ಕನ್ನಡೇತರರ ಸಂಖ್ಯೆ ವೃದ್ಧಿಸುತ್ತಾ ಸಾಗಿದೆ. ಕನ್ನಡಿಗರ ಹೋರಾಟ ಕೇವಲ ಪರಭಾಷೆಯ ಕಟೌಟ್ ತೆರವುಗೊಳಿಸುವುದಕ್ಕೆ ಸೀಮಿತವಾಗಬಾರದು. ಕನ್ನಡ ನಾಡಿನಲ್ಲಿಯೇ ಕನ್ನಡದ ಮಕ್ಕಳು ಅವಕಾಶ ವಂಚಿತರಾಗುತ್ತಿರುವುದನ್ನು ಗಮನಕ್ಕೆ ತಂದುಕೊಂಡು, ಕನ್ನಡದ ಮಕ್ಕಳ ಬದುಕನ್ನು ಹಸನು ಮಾಡುವ ನಿಟ್ಟಿನಲ್ಲಿ ಕಾರ್ಯೋನ್ಮುಖರಾಗಬೇಕಿದೆ.