ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಎಸ್‌ಒಯು: ಟ್ವಿಟರ್‌ನಲ್ಲಿ ಆಕ್ರೋಶ

ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ ಸಾಂತ್ವನ
Last Updated 21 ಫೆಬ್ರುವರಿ 2018, 19:30 IST
ಅಕ್ಷರ ಗಾತ್ರ

ಮೈಸೂರು: ‘ಕೆಎಸ್‌ಒಯು ಮಾನ್ಯತೆಗೂ ಕೇಂದ್ರ ಸರ್ಕಾರಕ್ಕೂ ಸಂಬಂಧವಿಲ್ಲ’ ಎಂದು ಮಾನವ ಸಂಪನ್ಮೂಲ ಸಚಿವ ಪ್ರಕಾಶ್‌ ಜಾವಡೇಕರ್‌ ಅವರು ಪ್ರತಿಕ್ರಿಯಿಸಿರುವುದಕ್ಕೆ ಕೆಎಸ್‌ಒಯುನಲ್ಲಿ ಪದವಿ ಪಡೆದವರು ಟ್ವಿಟರ್‌ನಲ್ಲಿ ಆಕ್ರೋಶ ವ್ಯಕ್ತಪಡಿಸಿದ್ದಾರೆ.

‘ಸಂಬಂಧವಿಲ್ಲ ಎಂದರೆ ಅರ್ಥವೇನು? ಯುಜಿಸಿ ಯಾರ ಅಧೀನಕ್ಕೆ ಬರುತ್ತದೆ?’ ಎಂದು ಪ್ರಶ್ನಿಸಿದ್ದಾರೆ. ‘ಸಚಿವರು ಈ ಬಗ್ಗೆ ಮಾಹಿತಿಯೇ ಇಲ್ಲ ಎಂದು ಹೇಳಿರುವುದು ಸುಳ್ಳಿನ ಕಂತೆ’ ಎಂದು ಟೀಕಿಸಿದ್ದಾರೆ.

‘ನಿಮಗೆ ನಮ್ಮ ಸಮಸ್ಯೆ ಗೊತ್ತಿಲ್ಲದೆ ಇದ್ದರೆ ನಿಮ್ಮ ಭೇಟಿಗೆ ಅವಕಾಶ ಮಾಡಿಕೊಡಿ. ನೀವು ಹೇಳಿದ ಸಮಯಕ್ಕೆ, ನೀವು ಹೇಳುವ ಜಾಗದಲ್ಲಿ ಭೇಟಿಯಾಗಲು ನಾವು ಸಿದ್ಧರಿದ್ದೇವೆ’ ಎಂದು ಅವರು ಕೋರಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿರುವ ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಕೆ.ರತ್ನಪ್ರಭಾ, ‘ಜಾವಡೇಕರ್ ಅವರಿಗೆ ವಿದ್ಯಾರ್ಥಿಗಳ ದುಃಖವನ್ನು ವಿವರಿಸಿದ್ದೇನೆ. ಅವರು ಪರಿಹಾರ ಕಂಡುಕೊಳ್ಳಲು ಪ್ರಯತ್ನಿಸುವುದಾಗಿ ಭರವಸೆ ನೀಡಿದ್ದಾರೆ. ನಿಮ್ಮ ನೋವು ಅವರಿಗೆ ತಿಳಿದಿದೆ’ ಎಂದು ಸಾಂತ್ವನ ಹೇಳಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT