ಅಭ್ಯರ್ಥಿಗಳು ಹಾಗೂ ಅವರ ಬೆಂಬಲಿಗರು ಮಾನಸಿಕ ಒತ್ತಡದಿಂದಾಗಿ ಕೋವಿಡ್ ಮುಂಜಾಗ್ರತಾ ನಿಯಮಗಳನ್ನು ಗಾಳಿಗೆ ತೂರಿ ಕೆಲಸ ಮಾಡುವ ಸಾಧ್ಯತೆಯೇ ಹೆಚ್ಚಾಗಿ ಇರುತ್ತಿತ್ತು. ಹಾಗಾಗಿದ್ದರೆ ಸೋಂಕು ಇನ್ನಷ್ಟು ವ್ಯಾಪಕವಾಗಲು ಅವಕಾಶವಾಗುತ್ತಿತ್ತು. ಈಗಾಗಲೇ ಸಾಂಸ್ಕೃತಿಕ ಕ್ಷೇತ್ರದ ಹಲವಾರು ಹಿರಿಕಿರಿಯರನ್ನು ಕೋವಿಡ್ನಿಂದಾಗಿ ಕಳೆದುಕೊಂಡಿದ್ದೇವೆ. ಚುನಾವಣೆಯಿಂದ ಇನ್ನಷ್ಟು ಜನರನ್ನು ಕಳೆದುಕೊಳ್ಳುವುದು ಬೇಡ.
-ಟಿ.ಸುರೇಂದ್ರ ರಾವ್,ಬೆಂಗಳೂರು