‘ಮುಸ್ಲಿಮರು ನನಗೆ ವೋಟು ಹಾಕಿಲ್ಲ. ಆದ್ದರಿಂದ ಆ ಸಮುದಾಯದ ಅಭಿವೃದ್ಧಿಗೆ ಶ್ರಮಿಸುವುದಿಲ್ಲ’ ಎಂದು ಹೊನ್ನಾಳಿ ಶಾಸಕ ಎಂ.ಪಿ.ರೇಣುಕಾಚಾರ್ಯ ಅವರು ಹೇಳಿರುವುದು (ಪ್ರ.ವಾ., ಜ. 23) ಖಂಡನೀಯ. ಶಾಸಕನಾಗಿ ಆಯ್ಕೆಯಾದ ಮೇಲೆ ತನ್ನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯಲ್ಲಿ ಬರುವ ಎಲ್ಲ ಸಮುದಾಯಗಳ ಅಭಿವೃದ್ಧಿಗೆ ಶ್ರಮಿಸಬೇಕಾದುದು ಆ ಶಾಸಕನ ಕರ್ತವ್ಯ. ‘ಯಾವುದೇ ಭೇದಭಾವ ತೋರದೆ ಕ್ಷೇತ್ರದ ಜನರ ಅಭಿವೃದ್ಧಿಗೆ ಶ್ರಮಿಸುತ್ತೇನೆ’ ಎಂದು ಶಾಸಕನಾಗಿ ಪ್ರಮಾಣವಚನ ಸ್ವೀಕರಿಸಿ, ಈ ರೀತಿ ಉಡಾಫೆಯಿಂದ ಮಾತನಾಡುವುದು ಅಕ್ಷಮ್ಯ ಮತ್ತು ಸಂವಿಧಾನಕ್ಕೆ ಎಸಗುವ ದ್ರೋಹ.