ರಾಜ್ಯ ಸರ್ಕಾರವು ಪ್ರಸಕ್ತ ಸಾಲಿನ ಬಜೆಟ್ನಲ್ಲಿ ಶಿಕ್ಷಣ ಕ್ಷೇತ್ರಕ್ಕೆ ₹ 29,768 ಕೋಟಿ ತೆಗೆದಿರಿಸಿರುವುದು ಸ್ವಾಗತಾರ್ಹ. ಶಿಕ್ಷಣವನ್ನು ಪ್ರಮುಖ ಆದ್ಯತಾ ವಲಯವಾಗಿ ಪರಿಗಣಿಸಿರುವುದು ಸಂತೋಷದ ಸಂಗತಿ. ಇದರ ಜೊತೆಗೆ, ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಶಾಸಕರು ಮೂರು ಶಾಲೆಗಳನ್ನು ದತ್ತು ತೆಗೆದುಕೊಂಡು ಅವುಗಳ ಅಭಿವೃದ್ಧಿಗೆ ಕ್ರಮ ಕೈಗೊಳ್ಳಬೇಕೆಂದು ಬಜೆಟ್ನಲ್ಲಿ ಪ್ರಸ್ತಾಪಿಸಲಾಗಿದೆ. ಎಲ್ಲ ಶಾಸಕರೂ ಇದನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸಬೇಕಿದೆ.