ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಪರೀತ್ಯ ಎದುರಿಸಲು ಸಿದ್ಧರಾಗೋಣ

Last Updated 25 ಆಗಸ್ಟ್ 2019, 20:15 IST
ಅಕ್ಷರ ಗಾತ್ರ

‘ಮುಂದಿನ 80 ವರ್ಷಗಳ ಕಾಲ ರಾಜ್ಯವನ್ನು ಅತಿವೃಷ್ಟಿ, ಅನಾವೃಷ್ಟಿ ಕಾಡಲಿದ್ದು, ಅದನ್ನು ಎದುರಿಸಲು ಪೂರ್ವತಯಾರಿ ಮಾಡಿಕೊಳ್ಳಬೇಕು’ ಎಂದು ಕೃಷಿ ಹವಾಮಾನ ತಜ್ಞ ಡಾ. ಎಂ.ಬಿ. ರಾಜೇಗೌಡ ಅವರು ಅಂಕಿ ಅಂಶಗಳ ಸಹಿತ ಸರ್ಕಾರಕ್ಕೆ ಸಲಹೆ ನೀಡಿದ್ದಾರೆ (ಪ್ರ.ವಾ., ಆ. 24).

ಅತಿವೃಷ್ಟಿಯ ಸಂದರ್ಭದಲ್ಲಿ ನದಿಗಳ ಮೂಲಕ ಹರಿದು ಹೋಗುವ ನೀರನ್ನು ಸಂಗ್ರಹಿಸಿಡುವ ಕ್ರಮವಾಗಬೇಕು. ಪ್ರತೀ ಮನೆಯಲ್ಲೂ ಮಳೆ ನೀರಿನ ಸಂಗ್ರಹ ಆಗಬೇಕಾದದ್ದು ಅನಿವಾರ್ಯವೂ ಹೌದು. ಉಡುಪಿಯ ಎಂ.ಜಿ.ಎಂ.ಕಾಲೇಜಿನಲ್ಲಿ ವರ್ಷಕ್ಕೆ ಕನಿಷ್ಠ 5 ಕೋಟಿ ಲೀಟರ್‌ ನೀರು ಸಂಗ್ರಹಿಸಿಡುವ ಯೋಜನೆಯನ್ನು ಅನುಷ್ಠಾನಕ್ಕೆ ತಂದಿರುವುದು ಮಾದರಿ. ಶಾಲಾ ಕಾಲೇಜುಗಳು ಇಂತಹ ಕ್ರಮ ಅನುಸರಿಸುವುದು ಒಳ್ಳೆಯದು. ಎಲ್ಲಾ ಖಾಸಗಿ ಸಂಸ್ಥೆಗಳು, ಶಿಕ್ಷಣ ಸಂಸ್ಥೆಗಳು ಈ ಕಡೆ ಗಮನ ಹರಿಸಬೇಕು.

ಒಂದು ಕಡೆ ನೆರೆ, ಇನ್ನೊಂದು ಕಡೆ ಬರ ಎಂಬ ಸ್ಥಿತಿ ಈಗಲೂ ರಾಜ್ಯದಲ್ಲಿದೆ. ಈ ವರ್ಷ ಕೆಲವು ಭಾಗಗಳಲ್ಲಿ ಪ್ರವಾಹ ಸೃಷ್ಟಿಯಾದರೆ, ತುಮಕೂರು, ಬೆಂಗಳೂರು ಮತ್ತಿತರ ಕಡೆ ಹದ ಮಳೆಯೇ ಆಗಿಲ್ಲ. ಇಂಥ ಕಡೆಗಳಲ್ಲಿ ಕುಡಿಯುವ ನೀರಿನ ಬವಣೆ ಹೇಳತೀರದು. ಇಂಥ ಸ್ಥಿತಿಯನ್ನು ನಿಭಾಯಿಸಲು ಮಾರ್ಗೋಪಾಯಗಳನ್ನು ಕಂಡುಕೊಳ್ಳಬೇಕು.

-ರುದ್ರಮೂರ್ತಿ ಎಂ.ಜೆ.,ಚಿತ್ರದುರ್ಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT