ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕರ ವಾಣಿ | ಸಿಂಧುತ್ವ ಪ್ರಮಾಣಪತ್ರ: ಆತಂಕ ನಿವಾರಿಸಿ

Last Updated 14 ಆಗಸ್ಟ್ 2020, 19:30 IST
ಅಕ್ಷರ ಗಾತ್ರ

ರಾಜ್ಯ ಸರ್ಕಾರದ ವಿವಿಧ ಹುದ್ದೆಗಳಿಗೆ ಆಯ್ಕೆಯಾಗಿರುವವರಿಗೆ ಸಿಂಧುತ್ವ ಪ್ರಮಾಣಪತ್ರಕ್ಕಾಗಿ ಅಧಿಕೃತ ಜಾಲತಾಣದಲ್ಲಿ ತಮ್ಮ ದಾಖಲೆಗಳನ್ನು ಸಲ್ಲಿಸುವಂತೆ ತಿಳಿಸಲಾಗಿದೆ. ಆದರೆ, ಈ ಜಾಲತಾಣ ಸರಿಯಾಗಿ ಕಾರ್ಯನಿರ್ವಹಿಸುತ್ತಿಲ್ಲ. ಎಲ್ಲ ತರಹದ ಸಿಂಧುತ್ವಗಳಿಗೂ ಒಂದೇ ಜಾಲತಾಣವನ್ನು ನೀಡಿದ್ದು, ದಿನದ ಇಪ್ಪತ್ತನಾಲ್ಕು ಗಂಟೆಯೂ ‘ಸರ್ವರ್‌ ಎರರ್‌’ ಎಂದು ತೋರಿಸುತ್ತಿದೆ. ದೂರು ಹೇಳಲು ಅಥವಾ ಸಹಾಯ ಕೇಳಲು ಸಹಾಯವಾಣಿ ನಂಬರನ್ನೂ ನೀಡಿಲ್ಲ. ಇದರಿಂದ ಆಕಾಂಕ್ಷಿಗಳು ಸಮಯಕ್ಕೆ ಸರಿಯಾಗಿ ಪ್ರಮಾಣಪತ್ರವನ್ನು ಸಲ್ಲಿಸಲಾಗದೆ ಕಂಗಾಲಾಗಿದ್ದಾರೆ. ಸರ್ಕಾರ ಕೂಡಲೇ ಪರ್ಯಾಯ ವ್ಯವಸ್ಥೆ ಕಲ್ಪಿಸಬೇಕು.

-ಓಬಳೇಶ ಎನ್., ತುಮಕೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT