‘ಹಿರಿಯರ ಮನೆ’ ಎಂದೇ ಕರೆಯಲಾಗುವ ರಾಜ್ಯ ವಿಧಾನ ಪರಿಷತ್ತಿನಲ್ಲಿ ಮಂಗಳವಾರ ನಡೆದ ಘಟನೆ ತೀರಾ ದುರದೃಷ್ಟಕರ. ಪರಿಷತ್ ಸಭಾಪತಿ ಕಾಂಗ್ರೆಸ್ನ ಕೆ.ಪ್ರತಾಪಚಂದ್ರ ಶೆಟ್ಟಿ ಅವರ ವಿರುದ್ಧ ಆಡಳಿತಾರೂಢ ಬಿಜೆಪಿ ಹಾಗೂ ಜೆಡಿಎಸ್ನ ಕೆಲವು ಸದಸ್ಯರು ಸಲ್ಲಿಸಿದ್ದ ಅವಿಶ್ವಾಸ ನಿರ್ಣಯಕ್ಕೆ ಸಂಬಂಧಪಟ್ಟಂತೆ ಸದನದಲ್ಲಿ ನಡೆದ ಮಾರಾಮಾರಿ, ನೂರು ವರ್ಷಕ್ಕೂ ಅಧಿಕ ಇತಿಹಾಸ ಹೊಂದಿರುವ ರಾಜ್ಯ ವಿಧಾನ ಪರಿಷತ್ತಿನ ಗೌರವ, ಘನತೆಯನ್ನು ಮಣ್ಣುಪಾಲು ಮಾಡಿದೆ.