ಸಚಿವರಾದ ಡಾ. ಸಿ.ಎನ್.ಅಶ್ವತ್ಥನಾರಾಯಣ ಮತ್ತು ಆರ್.ಅಶೋಕ ಅವರು ವರ್ಗಾವಣೆ ವಿಷಯವಾಗಿ ವಿಧಾನಸಭೆಯ ಮೊಗಸಾಲೆಯಲ್ಲಿಯೇ ಕಿತ್ತಾಡಿಕೊಂಡು ಕೈ-ಕೈ ಮಿಲಾಯಿಸುವ ಹಂತಕ್ಕೆ ತಲುಪಿದ್ದು ದುರದೃಷ್ಟಕರ. ಸರ್ಕಾರದ ಭಾಗವಾಗಿರುವ ಸಚಿವರೇ ಈ ರೀತಿ ನಡೆದುಕೊಂಡರೆ ಹೇಗೆ?
ಅದರಿಂದ ಕಾರ್ಯಕರ್ತರು ಪ್ರೇರಣೆ ಪಡೆಯುವುದಿಲ್ಲವೇ? ಅದೂ ವಿಧಾನಸಭೆಯ ಮೊಗಸಾಲೆಯಲ್ಲಿ ಈ ರೀತಿ ವರ್ತಿಸಿರುವುದು ಅವರ ಸ್ಥಾನಕ್ಕೆ ಶೋಭಿಸುವುದಿಲ್ಲ.