ಸ್ನಾತಕೋತ್ತರ ಪದವಿಯ ಶೈಕ್ಷಣಿಕ ವರ್ಷ ಸಾಮಾನ್ಯವಾಗಿ ಜೂನ್-ಜುಲೈ ತಿಂಗಳಲ್ಲಿ ಕೊನೆಗೊಳ್ಳಬೇಕಿತ್ತು. ಆದರೆ ಕೋವಿಡ್ ಪರಿಣಾಮದಿಂದಾಗಿ, ನಿಗದಿಗೊಂಡ ಪರೀಕ್ಷೆಗಳು ಮುಂದೂಡಲ್ಪಟ್ಟವು. ಇಂತಹ ಸಂದರ್ಭದಲ್ಲಿ, ಪ್ರಥಮ ದರ್ಜೆ ಕಾಲೇಜಿನ ಸಹಾಯಕ ಪ್ರಾಧ್ಯಾಪಕರು ಹಾಗೂ ಪ್ರಾಂಶುಪಾಲರ ನೇಮಕಾತಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರದ (ಕೆಇಎ) ವೆಬ್ಸೈಟ್ನಲ್ಲಿ ಏಕಾಏಕಿ ಅಧಿಸೂಚನೆ ಪ್ರಕಟವಾಗಿದೆ. ಇದರಿಂದ, ಸ್ನಾತಕೋತ್ತರ ಪದವಿಯ ಅಂತಿಮ ವರ್ಷದಲ್ಲಿದ್ದು, ಕೆ–ಸೆಟ್ ಪಾಸಾದ ಸಾವಿರಾರು ವಿದ್ಯಾರ್ಥಿಗಳು ಗೊಂದಲದೊಂದಿಗೆ ಆಘಾತ ಕ್ಕೊಳಗಾಗಿದ್ದಾರೆ. ಹಾಗಾಗಿ ಇಂತಹ ವಿದ್ಯಾರ್ಥಿಗಳಿಗೆ ಸಹಾಯಕ ಪ್ರಾಧ್ಯಾಪಕರ ನೇಮಕಾತಿಗೆ ಅರ್ಜಿ ಹಾಕಲು ಅವಕಾಶ ಮಾಡಿಕೊಡಬೇಕು. ಇಲ್ಲವೇ ರಾಜ್ಯದ ಎಲ್ಲ ವಿಶ್ವವಿದ್ಯಾಲಯಗಳ ಸ್ನಾತಕೋತ್ತರ ಪದವಿಯ ಅಂತಿಮ ವರ್ಷದ ಫಲಿತಾಂಶ ಪ್ರಕಟವಾಗುವವರೆಗೂ ಅಧಿಸೂಚನೆಯನ್ನು ಮುಂದೂಡಿ, ವಿದ್ಯಾರ್ಥಿಗಳಿಗೆ ಅನುಕೂಲ ಮಾಡಿಕೊಡಬೇಕು.