ಕೆಲ ದಿನಗಳ ಹಿಂದಷ್ಟೇ ಕರ್ನಾಟಕ ಹಾಲು ಮಹಾಮಂಡಳ (ಕೆಎಂಎಫ್) ಅಧೀನದ ಹಾಲು ಒಕ್ಕೂಟಗಳು ಹೈನೋತ್ಪನ್ನಗಳಾದ ಪೇಡಾ, ಮೈಸೂರು ಪಾಕ್, ತುಪ್ಪ ಮತ್ತಿತರ ಪದಾರ್ಥಗಳ ದರವನ್ನು ಏರಿಸಿದ್ದವು. ಇದೀಗ ಮಂಡಳಿಯು ಮತ್ತೊಮ್ಮೆ ಹಾಲಿನ ಗ್ರಾಹಕರಿಗೆ ಬೆಲೆ ಏರಿಕೆಯ ಆಘಾತ ನೀಡಲು ಮುಂದಾಗಿದೆ. ಹಾಲು ಉತ್ಪಾದಕರ ಹಿತವನ್ನೇ ಮುಂದಿಟ್ಟುಕೊಂಡು, ಗ್ರಾಹಕರಿಗೆ ಹೊರೆಯಾಗದಂತೆ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಹೇಳುವ ಮಂಡಳಿ, ಬೆಲೆ ಏರಿಕೆಯಲ್ಲಿ ಯಾವುದೇ ವ್ಯತ್ಯಯವಾದರೂ ಅದರಿಂದ ಗ್ರಾಹಕನಿಗೆ ಹೊರೆ ಎಂಬುದನ್ನೇ ಮರೆತಿದೆ.