ಶಿವಮೊಗ್ಗ, ಕುದುರೆಮುಖ, ಮಂಗಳೂರು ವಲಯ ಅರಣ್ಯ ವಿಭಾಗದಲ್ಲಿ ಹಂಚಿಹೋಗಿರುವ ಕೊಡಚಾದ್ರಿ ಬೆಟ್ಟದಲ್ಲಿ ರಸ್ತೆ ನಿರ್ಮಿಸಿ ವಾಹನ ಸೌಲಭ್ಯಗಳನ್ನು ಅಧಿಕೃತವಾಗಿ ಘೋಷಿಸಿದ ಪಕ್ಷದಲ್ಲಿ, ಚಾರಣಿಗರ ಸಂಖ್ಯೆ ಇಳಿಮುಖವಾಗಿ ಪ್ರವಾಸಿಗರ ಸಂಖ್ಯೆ ಹೆಚ್ಚುವುದರಲ್ಲಿ ಯಾವುದೇ ಅನುಮಾನವಿಲ್ಲ. ಸಹಜವಾಗಿ ವ್ಯಾಪಾರದ ಕೇಂದ್ರಗಳು, ಹೋಟೆಲ್ಗಳು ಬೆಟ್ಟದ ಮೇಲ್ಭಾಗದಲ್ಲಿ ನಿರ್ಮಾಣವಾಗುವ ಮೂಲಕ ಪರಿಸರ ಮಾಲಿನ್ಯಕ್ಕೆ ಎಡೆ ಮಾಡಿಕೊಟ್ಟಂತಾಗುತ್ತದೆ.