ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸ್ಥೆಯ ಗ್ರಹಣ ಬಿಡಿಸುವ ಕೆಲಸವಾಗಲಿ

Last Updated 26 ಜನವರಿ 2021, 19:30 IST
ಅಕ್ಷರ ಗಾತ್ರ

ಸಾಂವಿಧಾನಿಕ ಸಂಸ್ಥೆಯಾಗಿರುವ ಕರ್ನಾಟಕ ಲೋಕಸೇವಾ ಆಯೋಗಕ್ಕೆ ಕಳಂಕ ಅಂಟಿಸುವ ಕೃತ್ಯಗಳು ಪದೇ ಪದೇ ಹೊರಗೆ ಬರುತ್ತಿವೆ. ಪ್ರಥಮ ದರ್ಜೆ ಸಹಾಯಕರ ನೇಮಕಾತಿಗಾಗಿ ನಡೆಯಬೇಕಿದ್ದ ಪರೀಕ್ಷೆಯ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ರಾಜ್ಯದ ನಿರುದ್ಯೋಗಿ ಯುವಜನರ ಬಾಳಿನಲ್ಲಿ ಚೆಲ್ಲಾಟ ಆಡುವಂತಹ ದುಷ್ಕೃತ್ಯ. ಎಷ್ಟೋ ಯುವಕ, ಯುವತಿಯರು ಕಷ್ಟಪಟ್ಟು ಅಭ್ಯಾಸ ಮಾಡಿ ಪರೀಕ್ಷೆಗೆ ಸಿದ್ಧತೆ ಮಾಡಿಕೊಂಡಿರುತ್ತಾರೆ. ಆದರೆ ಪ್ರಶ್ನೆಪತ್ರಿಕೆ ಸೋರಿಕೆಯಾದರೆ ಅವರು ಮಾನಸಿಕವಾಗಿ ಕುಗ್ಗಿ ಹೋಗುತ್ತಾರೆ. ಕೆಲವು ಸಿಬ್ಬಂದಿಯ ಕಣ್ಣಾಮುಚ್ಚಾಲೆ ಆಟದಿಂದ ಸಂಸ್ಥೆಗೆ ಮಸಿ ಮೆತ್ತಿಕೊಳ್ಳುತ್ತಿದೆ. ಇನ್ನಾದರೂ ಸಂಸ್ಥೆಯ ಗ್ರಹಣ ಬಿಡಿಸುವ ಕೆಲಸವನ್ನು ಸರ್ಕಾರ ಪ್ರಾಮಾಣಿಕವಾಗಿ ಮಾಡಲಿ.

- ಪ್ರಶಾಂತ್ ಬುಳ್ಳಣ್ಣವರ,ಉಗರಗೋಳ, ಬೆಳಗಾವಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT