ಕರ್ನಾಟಕ ಲೋಕಸೇವಾ ಆಯೋಗವು ಗೆಜೆಟೆಡ್ ಪ್ರೊಬೇಷನರಿ ಹುದ್ದೆಗಳಿಗೆ ಇದೇ 24ರಂದು ಪೂರ್ವಭಾವಿ ಪರೀಕ್ಷೆ ಏರ್ಪಡಿಸಿದೆ. ಪ್ರತೀ ಎರಡು ಅಥವಾ ಮೂರು ವರ್ಷಗಳಿಗೊಮ್ಮೆ ಮಾತ್ರ ಅರ್ಜಿ ಕರೆಯಲಾಗುವ ಈ ಪರೀಕ್ಷೆಗೆ ಲಕ್ಷಾಂತರ ಮಂದಿ ಹಾಜರಾಗುತ್ತಾರೆ. ಆದರೆ ಸರ್ಕಾರಿ ಇಲಾಖೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ವೈದ್ಯರು, ನರ್ಸ್ಗಳು, ಪ್ರಥಮ ದರ್ಜೆ ಸಹಾಯಕರು, ಪಿಡಿಒಗಳು, ಆರೋಗ್ಯ ಅಧಿಕಾರಿಗಳು ಸೇರಿದಂತೆ ಹಲವರು ಈಗ ಕೊರೊನಾ ನಿಯಂತ್ರಣ ಕಾರ್ಯದಲ್ಲಿ ನಿರತರಾಗಿದ್ದಾರೆ. ಅವರಿಗೆ ಶನಿವಾರ ಮತ್ತು ಭಾನುವಾರ ಸಹ ರಜೆ ಇರುವುದಿಲ್ಲ. ಇಂತಹವರಲ್ಲಿ ಹಲವರು ಈ ಬಾರಿ ಕೆಎಎಸ್ ಬರೆಯುವ ಆಕಾಂಕ್ಷಿಗಳಾಗಿದ್ದು, ಅವರಿಗೆ ಪರೀಕ್ಷೆ ಬರೆಯಲು ಬಹಳಷ್ಟು ಸಮಸ್ಯೆಗಳು ಉಂಟಾಗುತ್ತಿವೆ.