ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಕೆಆರ್‌ಎಸ್‌: ಪರಿಣತರ ಹೇಳಿಕೆ ಮುಖ್ಯ

Last Updated 8 ಜುಲೈ 2021, 19:30 IST
ಅಕ್ಷರ ಗಾತ್ರ

ಕೆಆರ್‌ಎಸ್‌ ಅಣೆಕಟ್ಟೆ ಬಿರುಕು ಬಿಟ್ಟಿದೆ ಎಂದು ಮಂಡ್ಯ ಸಂಸದೆ ಸುಮಲತಾ ಹೇಳುತ್ತಿದ್ದಾರೆ. ಇದಕ್ಕೆ ವಿರುದ್ಧವಾದ ಹೇಳಿಕೆಗಳನ್ನು ಜೆಡಿಎಸ್‌ ನಾಯಕ ಎಚ್.ಡಿ.ಕುಮಾರಸ್ವಾಮಿ ನೀಡುತ್ತಿದ್ದಾರೆ. ಈ ವಾಗ್ವಾದ ಅನೇಕ ತಿಂಗಳುಗಳಿಂದ ಮುಂದುವರಿದಿದೆ. ಇದರಿಂದ ಮಂಡ್ಯ ಜಿಲ್ಲೆಯ ಜನ ಹಾಗೂ ಇತರ ಜನಸಾಮಾನ್ಯರು ಗೊಂದಲದಲ್ಲಿದ್ದಾರೆ. ಅಣೆಕಟ್ಟೆಯ ಪರಿಸ್ಥಿತಿ ಬಗ್ಗೆ ಅದರ ನಿರ್ವಹಣೆ ಮಾಡುತ್ತಿರುವ ತಂತ್ರಜ್ಞರು ಹೇಳಿಕೆ ನೀಡಬೇಕೇ ಹೊರತು ರಾಜಕಾರಣಿಗಳಲ್ಲ. ರಾಜಕಾರಣಿಗಳು ನೀಡುವ ಹೇಳಿಕೆಗಳು ಸಹ ತಂತ್ರಜ್ಞರ ಅಭಿಪ್ರಾಯವನ್ನು ಆಧರಿಸಿ ಇರಬೇಕಾಗುತ್ತದೆ. ಆದ್ದರಿಂದ ಅಣೆಕಟ್ಟೆಯ ನಿರ್ವಹಣೆಯ ಪರಿಣತರು ಈ ಸಂದರ್ಭದಲ್ಲಿ ಹೇಳಿಕೆಯನ್ನು ನೀಡುವ ಮೂಲಕ ಜನರ ಗೊಂದಲ ಹಾಗೂ ರಾಜಕೀಯ ಮೇಲಾಟದ ಹೇಳಿಕೆಗಳಿಗೆ ತೆರೆ ಎಳೆಯಬೇಕಾಗಿದೆ.

–ಈ.ಬಸವರಾಜು, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT