ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯಕೀಯ ಮತ್ತು ಪೊಲೀಸ್ ಸಿಬ್ಬಂದಿಗೆ ವಾರಿಯರ್ಸ್ ಪಟ್ಟ ಕಟ್ಟಿ ಅವರನ್ನು ಅಭಿನಂದಿಸಿದ್ದೇವೆ, ಗೌರವ ಸೂಚಿಸಿ ಚಪ್ಪಾಳೆ ತಟ್ಟಿದ್ದೇವೆ. ನಾಡನ್ನು ಬೆಳಗಿಸುವ ವಿವಿಧ ವೃತ್ತಿಗಳಲ್ಲಿ ತಮ್ಮನ್ನು ತೊಡಗಿಸಿಕೊಂಡು, ಶ್ರಮವಹಿಸಿ ದುಡಿದು, ದೇಶಕ್ಕಾಗಿ ತಮ್ಮ ಜೀವವನ್ನೇ ಮುಡಿಪಾಗಿಟ್ಟ ಈ ಶ್ರಮಿಕ ವೃಂದದ ಸಹೋದರ ಸಹೋದರಿಯರಿಗೆ ನಾವ್ಯಾಕೆ ಗೌರವ ಸೂಚಿಸಬಾರದು?