<p>‘ಹಳ್ಳಿ ಆಸ್ಪತ್ರೆಗಳು ಹಾಸಿಗೆ ಹಿಡಿದಿವೆ ಸೋಮಿ...!’ ಎಂಬ ಲೇಖನ (ಪ್ರ.ವಾ., ಜುಲೈ 7) ಸಮಯೋಚಿತವಾಗಿದೆ. ಕೊರೊನಾ ಸಾಂಕ್ರಾಮಿಕವು ಭಾರತದಲ್ಲಿನ, ವಿಶೇಷವಾಗಿ ಕರ್ನಾಟಕದಲ್ಲಿನ ಆರೋಗ್ಯ ಕೇಂದ್ರಗಳ ಸ್ಥಿತಿಗತಿಗೆ ಕನ್ನಡಿ ಹಿಡಿದಿದೆ. ಆರೋಗ್ಯ ವ್ಯವಸ್ಥೆಯ ವಿಷಯದಲ್ಲಿ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದೆ.</p>.<p>ವಿಶ್ವ ಆರೋಗ್ಯ ಸಂಸ್ಥೆ ವರದಿಯ ಪ್ರಕಾರ, ಚೀನಾ ಪ್ರತೀ 10,000 ರೋಗಿಗಳಿಗೆ ಕನಿಷ್ಠ 43.1ರಷ್ಟು ಹಾಸಿಗೆಗಳನ್ನು ಹೊಂದಿದ್ದರೆ, ಭಾರತವು ಕೇವಲ 5.3ರಷ್ಟು ಹಾಸಿಗೆಗಳನ್ನು ಹೊಂದಿದೆ. ಇದು ಚಿಂತಿಸಬೇಕಾದ ವಿಷಯ. ಭಾರತವು ಜಾಗತಿಕ ಶಕ್ತಿಯಾಗಿ ತನ್ನನ್ನು ಗುರುತಿಸಿಕೊಳ್ಳಲು ಪ್ರಯತ್ನಿಸುತ್ತಿರುವ ರಾಷ್ಟ್ರವಾಗಿದೆ.</p>.<p>ಈ ಕನಸನ್ನು ಸಾಕಾರಗೊಳಿಸಲು ಆರೋಗ್ಯ ವ್ಯವಸ್ಥೆಗೆ ಬಜೆಟ್ನಲ್ಲಿ ಹೆಚ್ಚಿನ ಹಣ ಮೀಸಲಿಡುವುದು ಮತ್ತು ಪ್ರಾಥಮಿಕ ಆರೋಗ್ಯ ವ್ಯವಸ್ಥೆಯ ಬಲವರ್ಧನೆ ಮಾಡಬೇಕಾದುದು ಅತ್ಯಗತ್ಯ. ಲೇಖಕರು ನೀಡಿರುವ ಗರ್ಭಿಣಿಯೊಬ್ಬರ ಉದಾಹರಣೆಯು ಸರ್ಕಾರವು ಆರೋಗ್ಯ ವ್ಯವಸ್ಥೆಗೆ ನೀಡಿದ ಪ್ರಾಮುಖ್ಯತೆಯ ಬಗೆಗೆ ಬೆಳಕು ಚೆಲ್ಲುತ್ತದೆ.</p>.<p><em><strong>–ರಮೇಶ್ ಪುಟ್ಟರಾಜು, ಬೆಂಗಳೂರು</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>‘ಹಳ್ಳಿ ಆಸ್ಪತ್ರೆಗಳು ಹಾಸಿಗೆ ಹಿಡಿದಿವೆ ಸೋಮಿ...!’ ಎಂಬ ಲೇಖನ (ಪ್ರ.ವಾ., ಜುಲೈ 7) ಸಮಯೋಚಿತವಾಗಿದೆ. ಕೊರೊನಾ ಸಾಂಕ್ರಾಮಿಕವು ಭಾರತದಲ್ಲಿನ, ವಿಶೇಷವಾಗಿ ಕರ್ನಾಟಕದಲ್ಲಿನ ಆರೋಗ್ಯ ಕೇಂದ್ರಗಳ ಸ್ಥಿತಿಗತಿಗೆ ಕನ್ನಡಿ ಹಿಡಿದಿದೆ. ಆರೋಗ್ಯ ವ್ಯವಸ್ಥೆಯ ವಿಷಯದಲ್ಲಿ ಸರ್ಕಾರಕ್ಕೆ ಎಚ್ಚರಿಕೆಯನ್ನು ನೀಡಿದೆ.</p>.<p>ವಿಶ್ವ ಆರೋಗ್ಯ ಸಂಸ್ಥೆ ವರದಿಯ ಪ್ರಕಾರ, ಚೀನಾ ಪ್ರತೀ 10,000 ರೋಗಿಗಳಿಗೆ ಕನಿಷ್ಠ 43.1ರಷ್ಟು ಹಾಸಿಗೆಗಳನ್ನು ಹೊಂದಿದ್ದರೆ, ಭಾರತವು ಕೇವಲ 5.3ರಷ್ಟು ಹಾಸಿಗೆಗಳನ್ನು ಹೊಂದಿದೆ. ಇದು ಚಿಂತಿಸಬೇಕಾದ ವಿಷಯ. ಭಾರತವು ಜಾಗತಿಕ ಶಕ್ತಿಯಾಗಿ ತನ್ನನ್ನು ಗುರುತಿಸಿಕೊಳ್ಳಲು ಪ್ರಯತ್ನಿಸುತ್ತಿರುವ ರಾಷ್ಟ್ರವಾಗಿದೆ.</p>.<p>ಈ ಕನಸನ್ನು ಸಾಕಾರಗೊಳಿಸಲು ಆರೋಗ್ಯ ವ್ಯವಸ್ಥೆಗೆ ಬಜೆಟ್ನಲ್ಲಿ ಹೆಚ್ಚಿನ ಹಣ ಮೀಸಲಿಡುವುದು ಮತ್ತು ಪ್ರಾಥಮಿಕ ಆರೋಗ್ಯ ವ್ಯವಸ್ಥೆಯ ಬಲವರ್ಧನೆ ಮಾಡಬೇಕಾದುದು ಅತ್ಯಗತ್ಯ. ಲೇಖಕರು ನೀಡಿರುವ ಗರ್ಭಿಣಿಯೊಬ್ಬರ ಉದಾಹರಣೆಯು ಸರ್ಕಾರವು ಆರೋಗ್ಯ ವ್ಯವಸ್ಥೆಗೆ ನೀಡಿದ ಪ್ರಾಮುಖ್ಯತೆಯ ಬಗೆಗೆ ಬೆಳಕು ಚೆಲ್ಲುತ್ತದೆ.</p>.<p><em><strong>–ರಮೇಶ್ ಪುಟ್ಟರಾಜು, ಬೆಂಗಳೂರು</strong></em></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>