ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಜಮೀನ್ದಾರಿ ಪಾಳೆಗಾರಿಕೆ ಪರಿಭಾಷೆ

Last Updated 21 ಡಿಸೆಂಬರ್ 2021, 19:30 IST
ಅಕ್ಷರ ಗಾತ್ರ

ರಾಜ್ಯ ಸರ್ಕಾರ ಜಾರಿಗೊಳಿಸಿರುವ ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ಮತ್ತು ಎಪಿಎಂಸಿ ತಿದ್ದುಪಡಿ ಕಾಯ್ದೆ ಗಳನ್ನು ಸಮರ್ಥಿಸುತ್ತಾ ಸಂಬಂಧಿಸಿದ ಸಚಿವರು, ಈ ಕಾಯ್ದೆ ಪ್ರಕಾರ ‘ಯಾರು ಬೇಕಾದರೂ ಎಷ್ಟು ಬೇಕಾದರೂ ಎಲ್ಲಿ ಬೇಕಾದರೂ ಯಾರಿಂದ ಬೇಕಾದರೂ ಭೂಮಿಯನ್ನು ಕೊಂಡುಕೊಳ್ಳಬಹುದು’ ಎಂದೂ ‘ಯಾರು ಬೇಕಾದರೂ ಯಾರಿಂದ ಬೇಕಾದರೂ ಯಾವಾಗ ಬೇಕಾದರೂ ಎಷ್ಟು ಬೆಲೆಗೆ ಬೇಕಾದರೂ ಕೃಷಿ ಉತ್ಪನ್ನಗಳನ್ನು ಖರೀದಿಸ ಬಹುದು’ ಎಂದೂ ಹೇಳಿದ್ದಾರೆ.

ಇಲ್ಲಿ ಪ್ರಶ್ನೆ: ಇದು ಯಾವ ಪರಿಭಾಷೆ? ಇದು ಜನತಂತ್ರ ಪರಿಭಾಷೆಯಲ್ಲ. ಈ ಕಾಯ್ದೆಗಳು ನಮ್ಮ ರೈತಾಪಿ ವರ್ಗವನ್ನು, ವಿಶೇಷವಾಗಿ ಒಟ್ಟು ಭೂಹಿಡುವಳಿಗಳಲ್ಲಿ ಶೇ 85ರಷ್ಟಿರುವ ಅತಿಸಣ್ಣ ಮತ್ತು ಸಣ್ಣ ಭೂಹಿಡುವಳಿದಾರ ರನ್ನು ನಿರ್ನಾಮ ಮಾಡಿಬಿಡುತ್ತವೆ. ಸ್ವಾತಂತ್ರ್ಯೋತ್ತರ ಭಾರತದಲ್ಲಿ ಸರ್ಕಾರಗಳು, ಅದರಲ್ಲಿಯೂ ಕರ್ನಾಟಕದಲ್ಲಿ ಅರಸು ನೇತೃತ್ವದಲ್ಲಿ ಜಮೀನ್ದಾರಿ ಪಾಳೆಗಾರಿಕೆಯನ್ನು ತೊಡೆದುಹಾಕಲು ಪ್ರಯತ್ನ ನಡೆಸಲಾಗಿತ್ತು. ಈಗ ಮತ್ತೆ ಅದೇ ಜಮೀನ್ದಾರಿ ಪಾಳೆಗಾರಿಕೆಯನ್ನು ಪುನರ್‌ಸ್ಥಾಪಿಸಲು ಸರ್ಕಾರ ಕಟಿಬದ್ಧವಾಗಿರುವಂತೆ ಕಾಣುತ್ತದೆ. ಇದನ್ನು ನಾವು ತೀವ್ರವಾಗಿ ವಿರೋಧಿಸಬೇಕು.

-ಟಿ.ಆರ್.ಚಂದ್ರಶೇಖರ, ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT