ಕಾಡಿನಲ್ಲಿ ಮಾನವನ ಅತಿಯಾದ ಹಸ್ತಕ್ಷೇಪವನ್ನು ಕಡಿಮೆ ಮಾಡುವುದು ಇದರಲ್ಲಿ ಮುಖ್ಯವಾದುದು. ಆಹಾರ ಸರಪಳಿಯಲ್ಲಿ ಸಮತೋಲನ ಕಾಪಾಡುವುದು, ಅರಣ್ಯ ಪ್ರದೇಶಗಳಲ್ಲಿ ಗಣಿಗಾರಿಕೆಯಂತಹ ಚಟುವಟಿಕೆಗಳನ್ನು ನಿರ್ಬಂಧಿಸುವುದು, ಕಾಳ್ಗಿಚ್ಚಿಗೆ ಕಡಿವಾಣ, ಕಾಡುಪ್ರಾಣಿಗಳಿಗೆ ಪ್ರತ್ಯೇಕ ಕಾರಿಡಾರ್ ವ್ಯವಸ್ಥೆ ಸೇರಿದಂತೆ ವಿವಿಧ ಯೋಜನೆಗಳನ್ನು ರೂಪಿಸಿ ಕಟ್ಟುನಿಟ್ಟಾಗಿ ಜಾರಿಗೆ ತರಬೇಕು.