ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಗಂಗಾ ಕಲ್ಯಾಣಕ್ಕೆ ಪುನರ್‌ಚಾಲನೆ ಸಿಗಲಿ

Last Updated 19 ಜನವರಿ 2021, 15:30 IST
ಅಕ್ಷರ ಗಾತ್ರ

ಬಡ ಹಾಗೂ ಮಧ್ಯಮ ವರ್ಗದ ರೈತರ ಜಮೀನಿಗೆ ಉಚಿತವಾಗಿ ಕೊಳವೆಬಾವಿ ಕೊರೆಸಿಕೊಡುವ ಗಂಗಾ ಕಲ್ಯಾಣ ಯೋಜನೆಯು ಒಂದು ಉತ್ತಮ ಯೋಜನೆ ಎಂಬುದರಲ್ಲಿ ಎರಡು ಮಾತಿಲ್ಲ. ಈ ಯೋಜನೆಯಡಿ ಪ್ರತಿವರ್ಷ ಸಾವಿರಾರು ಕೊಳವೆಬಾವಿಗಳನ್ನು ಕೊರೆಸಲಾಗುತ್ತದೆ. ಬಜೆಟ್‌ನಲ್ಲಿ ಸರ್ಕಾರ ಇದಕ್ಕಾಗಿ ಹಂಚಿಕೆ ಮಾಡುವ ಅನುದಾನವನ್ನು ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಕಡ್ಡಾಯವಾಗಿ ಬಳಕೆ ಮಾಡಬೇಕು. ಆದರೆ ಎರಡು ವರ್ಷಗಳಿಂದ ಯಾವುದೇ ಕೊಳವೆಬಾವಿಗಳನ್ನು ಕೊರೆದಿಲ್ಲ. ಅಲ್ಲದೆ ಕೊರೆದಿದ್ದ ಕೊಳವೆಬಾವಿಗಳಿಗೆ ಮೋಟರ್ ಪಂಪ್‍ಸೆಟ್‌ಗಳನ್ನು ವಿತರಿಸಿಲ್ಲ. ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳು ಪಣ ತೊಡಬೇಕು.

ದಿಲೀಪ್ ಕುಮಾರ್ ಕೆ.,ಬರಗೇನಹಳ್ಳಿ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT