ಬಡ ಹಾಗೂ ಮಧ್ಯಮ ವರ್ಗದ ರೈತರ ಜಮೀನಿಗೆ ಉಚಿತವಾಗಿ ಕೊಳವೆಬಾವಿ ಕೊರೆಸಿಕೊಡುವ ಗಂಗಾ ಕಲ್ಯಾಣ ಯೋಜನೆಯು ಒಂದು ಉತ್ತಮ ಯೋಜನೆ ಎಂಬುದರಲ್ಲಿ ಎರಡು ಮಾತಿಲ್ಲ. ಈ ಯೋಜನೆಯಡಿ ಪ್ರತಿವರ್ಷ ಸಾವಿರಾರು ಕೊಳವೆಬಾವಿಗಳನ್ನು ಕೊರೆಸಲಾಗುತ್ತದೆ. ಬಜೆಟ್ನಲ್ಲಿ ಸರ್ಕಾರ ಇದಕ್ಕಾಗಿ ಹಂಚಿಕೆ ಮಾಡುವ ಅನುದಾನವನ್ನು ಆರ್ಥಿಕ ವರ್ಷದ ಅಂತ್ಯದ ವೇಳೆಗೆ ಕಡ್ಡಾಯವಾಗಿ ಬಳಕೆ ಮಾಡಬೇಕು. ಆದರೆ ಎರಡು ವರ್ಷಗಳಿಂದ ಯಾವುದೇ ಕೊಳವೆಬಾವಿಗಳನ್ನು ಕೊರೆದಿಲ್ಲ. ಅಲ್ಲದೆ ಕೊರೆದಿದ್ದ ಕೊಳವೆಬಾವಿಗಳಿಗೆ ಮೋಟರ್ ಪಂಪ್ಸೆಟ್ಗಳನ್ನು ವಿತರಿಸಿಲ್ಲ. ಯೋಜನೆಯ ಪರಿಣಾಮಕಾರಿ ಅನುಷ್ಠಾನಕ್ಕೆ ಅಧಿಕಾರಿಗಳು ಪಣ ತೊಡಬೇಕು.