ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ರೋಗಿಗಳು ಬಲಿಪಶುಗಳಾಗದಿರಲಿ

Last Updated 6 ಫೆಬ್ರುವರಿ 2020, 19:30 IST
ಅಕ್ಷರ ಗಾತ್ರ

ದಾವಣಗೆರೆಯ ಚಿಗಟೇರಿ ಜಿಲ್ಲಾ ಆಸ್ಪತ್ರೆಯಲ್ಲಿ ಸಕಾಲಕ್ಕೆ ವೆಂಟಿಲೇಟರ್ ಸೌಕರ್ಯ ಸಿಗದೆ ಗರ್ಭಿಣಿಯೊಬ್ಬರು ಸಾವನ್ನಪ್ಪಿರುವುದು (ಪ್ರ.ವಾ., ಫೆ. 5) ವಿಷಾದಕರ ಸಂಗತಿ. ಆಸ್ಪತ್ರೆಯಲ್ಲಿ ವೆಂಟಿಲೇಟರ್‌ಗಳ ಸಮಸ್ಯೆ ಇದೆ ಎಂದು ಗೊತ್ತಿದ್ದರೂ ಅದನ್ನು ಆದ್ಯತೆಯ ಮೇಲೆ ಸರಿಪಡಿಸಿಕೊಳ್ಳದೇ ಇದ್ದುದು ಖಂಡನೀಯ.‌

ಸರ್ಕಾರಿ ಆಸ್ಪತ್ರೆಗಳಲ್ಲಿ ಮೂಲ ಸೌಕರ್ಯ ಕೊರತೆ ನೀಗಿಸುವುದು ಸರ್ಕಾರಕ್ಕೆ ಆದ್ಯತೆಯಾಗಬೇಕು. ವಾರ್ಡ್‌ಗಳಲ್ಲಿ ಸಾಮಾನ್ಯವಾಗಿ ಸ್ವಚ್ಛತೆಯ ಕೊರತೆ ಎದ್ದು ಕಾಣುತ್ತದೆ. ಸರ್ಕಾರ ಅನುದಾನ ಕೊಟ್ಟರೂ ಅದು ಪರಿಣಾಮಕಾರಿಯಾಗಿ ಮತ್ತು ಸಮರ್ಪಕವಾಗಿ ಬಳಕೆಯಾಗುತ್ತಿಲ್ಲ ಎಂಬ ದೂರುಗಳು ಇವೆ. ಇಂತಹ ಕಾರಣಗಳಿಗೆ ರೋಗಿಗಳು ಬಲಿಪಶು ಆಗದಿರಲಿ.

–ಚಂದ್ರಶೇಖರ,ದಾವಣಗೆರೆ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT