ಸಿಇಟಿಯನ್ನು ಇದೇ 30 ಮತ್ತು 31ರಂದು ನಡೆಸಲು ನಿರ್ಧರಿಸಲಾಗಿದೆ. ರಾಜ್ಯದಲ್ಲಿ ಆ ವೇಳೆಗೆ ಕೊರೊನಾ ಸೋಂಕಿನ ಪರಿಸ್ಥಿತಿ ಏನಾಗಿರುತ್ತದೆ ಎಂಬುದು ನಿರೀಕ್ಷೆಗೆ ನಿಲುಕದ ಸಂಗತಿ. ಎಸ್ಎಸ್ಎಲ್ಸಿ ಪರೀಕ್ಷೆಯನ್ನು ಸರ್ಕಾರ ಇತ್ತೀಚೆಗೆ ಯಶಸ್ವಿಯಾಗಿ ನಡೆಸಿತು. ಎಸ್ಎಸ್ಎಲ್ಸಿ ನಂತರದ ಶಿಕ್ಷಣಕ್ಕೆ ಅರ್ಹ ವಿದ್ಯಾರ್ಥಿಗಳನ್ನು ಗುರುತಿಸಲು ಈ ಪರೀಕ್ಷೆ ನಡೆಸಬೇಕಾಯಿತು ಎಂಬುದನ್ನು ಎಲ್ಲರೂ ಒಪ್ಪುತ್ತಾರೆ.