ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಯುವಸಮೂಹ ರಾಜಕೀಯಕ್ಕೆ ಬರಲಿ

Last Updated 1 ಜನವರಿ 2021, 19:31 IST
ಅಕ್ಷರ ಗಾತ್ರ

ಕೇರಳದ ತಿರುವನಂತಪುರ ಮಹಾನಗರಪಾಲಿಕೆಯ ಮೇಯರ್ ಸ್ಥಾನಕ್ಕೆ 21 ವರ್ಷದ ಆರ್ಯ ರಾಜೇಂದ್ರನ್ ಅವರನ್ನು ಸಿಪಿಎಂ ಜಿಲ್ಲಾ ಸಮಿತಿಯು ಶಿಫಾರಸು ಮಾಡಿರುವುದು (ಪ್ರ.ವಾ., ಡಿ. 26) ಸಂತೋಷದ ವಿಷಯ. ಆರ್ಯ ಅವರಂತೆ ಇಂದಿನ ಯುವಸಮೂಹವು ರಾಜಕೀಯ ಕ್ಷೇತ್ರದಲ್ಲಿ ತಮ್ಮನ್ನು ಹೆಚ್ಚಾಗಿ ತೊಡಗಿಸಿಕೊಳ್ಳುವಂತೆ ಆಗಬೇಕು. ಹಾಗೆಯೇ 65 ವರ್ಷಕ್ಕೆ ರಾಜಕಾರಣಿಗಳನ್ನು ರಾಜಕೀಯದಿಂದ ನಿವೃತ್ತಿಗೊಳಿಸುವ ಕಾನೂನು ಜಾರಿಗೆ ಬರಬೇಕು. ‘ಹೊಸ ಚಿಗುರು, ಹಳೇ ಬೇರು ಕೂಡಿರಲು ಮರ ಸೊಬಗು’ ಎನ್ನುವ ಕವಿವಾಣಿಯಂತೆ ಅನುಭವಿ ರಾಜಕಾರಣಿಗಳು ಯುವ ರಾಜಕಾರಣಿಗಳಿಗೆ ದೇಶದ ಸರ್ವತೋಮುಖ ಬೆಳವಣಿಗೆಗೆ ಪೂರಕವಾದ ಸಲಹೆ ಸೂಚನೆಗಳನ್ನು ನೀಡುತ್ತಾ ಬರಲಿ. ಒಟ್ಟಾರೆ ಇಂದಿನ ಯುವಶಕ್ತಿಯು ದೇಶವನ್ನು ಅಭಿವೃದ್ಧಿ ಪಥದ ಕಡೆ ಕೊಂಡೊಯ್ಯುವ ಆಶಾಕಿರಣವಾಗಲಿ.

–ಟಿ.ಎಸ್.ಪ್ರತಿಭಾ, ಚಿತ್ರದುರ್ಗ

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT