ಒಬ್ಬ ಮನುಷ್ಯ ದಿನದಲ್ಲಿ ಹನ್ನೆರಡು ಗಂಟೆ ಕರ್ತವ್ಯ ನಿರ್ವಹಿಸುವುದರಿಂದ ಇತರ ದಿನನಿತ್ಯದ ಕೆಲಸಗಳಿಗೆ ತೊಡಕು ಉಂಟಾಗುತ್ತದೆ ಎಂಬ ದೂರದೃಷ್ಟಿಯಿಂದ ಕರ್ತವ್ಯದ ವೇಳೆಯನ್ನು ಎಂಟು ಗಂಟೆಗಳಿಗೆ ಇಳಿಸುವಲ್ಲಿ ಸಫಲರಾದರು. ದೇಶದ ಅರ್ಥವ್ಯವಸ್ಥೆಯ ಬಗ್ಗೆ ಸ್ಪಷ್ಟ ಕಲ್ಪನೆ ಹೊಂದಿದ್ದ ಅವರು, ತಮ್ಮ ‘ದಿ ಪ್ರಾಬ್ಲಮ್ ಆಫ್ ದಿ ರುಪಿ’ ಎಂಬ ಗ್ರಂಥದಲ್ಲಿ ಭಾರತೀಯ ರಿಸರ್ವ್ ಬ್ಯಾಂಕ್ ಸ್ಥಾಪನೆ ಮತ್ತು ಪ್ರತೀ ಇಪ್ಪತ್ತು ವರ್ಷಗಳಿಗೊಮ್ಮೆ ನೋಟು ಅಮಾನ್ಯೀಕರಣದ ಬಗ್ಗೆ ಉಲ್ಲೇಖಿಸಿದ್ದಾರೆ.