ಕರ್ನಾಟಕ ರಿಯಲ್ ಎಸ್ಟೇಟ್ ನಿಯಂತ್ರಣ ಪ್ರಾಧಿಕಾರದ (ರೇರಾ) ಅಡಿ ನೋಂದಾಯಿಸಿದ ಯೋಜನೆಗಳು ಗಡುವಿನೊಳಗೆ ಮುಗಿಯದೆ ಖರೀದಿದಾರರಿಗೆ ‘ಮನೆಯೂ ಇಲ್ಲ, ಹಣವೂ ಇಲ್ಲ’ ಎಂಬ ವರದಿಯು (ಪ್ರ.ವಾ., ಆ. 25) ಮುಂಗಡ ಹಣ ಪಾವತಿಸಿ ಮನೆಗಾಗಿ ಕಾಯುತ್ತಿರುವವರ ಅಳಲನ್ನು ತೆರೆದಿಟ್ಟಿದೆ. ಬಿಲ್ಡರ್ಗಳ ಬೇಜವಾಬ್ದಾರಿಗೆ ರೇರಾವನ್ನು ದೂರುವುದು ಸರಿಯಲ್ಲ ಎಂದು ರೇರಾದ ಕಾರ್ಯದರ್ಶಿ ಹೇಳಿದ್ದಾರೆ. ಇದರಿಂದ, ಬಿಲ್ಡರ್ಗಳು ಬೇಜವಾಬ್ದಾರಿಯಿಂದ ವರ್ತಿಸಿದ್ದಾರೆ ಎಂಬುದನ್ನು ಒಪ್ಪಿಕೊಂಡಂತೆ ಆಯಿತಲ್ಲವೇ? ಅದಕ್ಕಾಗಿ ಪ್ರಾಧಿಕಾರವನ್ನಲ್ಲದೆ ಮತ್ಯಾರನ್ನು ದೂರಬೇಕು?