ಅಧಿಕಾರಿಗಳು ಸರಿಯಿಲ್ಲ ಎಂದು ಅಧಿಕಾರಸ್ಥ ರಾಜಕಾರಣಿಗಳು ಬಹಿರಂಗವಾಗಿ ಹೇಳಿಕೆ ನೀಡುವುದು ಸಮಂಜಸವಲ್ಲ. ಇದು, ಅಧಿಕಾರಿ ವರ್ಗದ ಬಗ್ಗೆ ಜನರಲ್ಲಿ ಅವಿಶ್ವಾಸ ಮೂಡಿಸುತ್ತದೆ. ಅದರ ಬದಲು, ಅದಕ್ಷ, ಭ್ರಷ್ಟ ಅಧಿಕಾರಿಗಳನ್ನು ಗುರುತಿಸಿ, ಅವರ ವಿರುದ್ಧ ಶಿಸ್ತುಕ್ರಮ ಜರುಗಿಸಲಿ. ದಕ್ಷರನ್ನು, ಪ್ರಾಮಾಣಿಕರನ್ನು ಆಯಕಟ್ಟಿನ ಜಾಗಗಳಲ್ಲಿ ಕೂರಿಸಲಿ.