ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಆಶ್ರಯ ಮನೆ: ಸಾಮಾಜಿಕ ಬದ್ಧತೆ ಬೇಕು

Last Updated 12 ಡಿಸೆಂಬರ್ 2019, 20:15 IST
ಅಕ್ಷರ ಗಾತ್ರ

ಆಶ್ರಯ ಮನೆ ಹಂಚಿಕೆ ವಿಷಯಕ್ಕೆ ಸಂಬಂಧಿಸಿದಂತೆ ಗ್ರಾಮಸಭೆಗೆ ಇರುವ ಅಧಿಕಾರ ಮೊಟಕುಗೊಳಿಸಲು ಸರ್ಕಾರ ನಿರ್ಧರಿಸಿರುವುದಾಗಿ ವರದಿಯಾಗಿದೆ (ಪ್ರ.ವಾ., ಡಿ. 12).ಗ್ರಾಮೀಣ ಭಾಗದಲ್ಲಿ ಪ್ರಭಾವಿ ವ್ಯಕ್ತಿಗಳ ಒತ್ತಾಯಕ್ಕೆ ಮಣಿದೋ ಆಮಿಷಗಳಿಗೆ ಒಳಗಾಗಿಯೋ ಅಥವಾ ತಮ್ಮ ಸುತ್ತಲೂ ಸೃಷ್ಟಿಯಾಗುವ ಉಸಿರುಕಟ್ಟುವ ವಾತಾವರಣದಿಂದಲೋ ಎಷ್ಟೋ ಗ್ರಾಮಸಭೆಗಳು ಮೂಲ ಆಶಯಗಳಿಗೆ ತಕ್ಕಂತೆ ಕೆಲಸ ಮಾಡಲು ಸಾಧ್ಯವಾಗಿಲ್ಲ. ಅದನ್ನು ಸರಿಪಡಿಸುವ ಜವಾಬ್ದಾರಿ ಸರ್ಕಾರಕ್ಕೆ ಇದೆ. ಹಾಗಂತ, ಅಧಿಕಾರವನ್ನೇ ಮೊಟಕು ಮಾಡುವುದು ಸರಿಯಲ್ಲ.

ಫಲಾನುಭವಿಗಳ ಪಟ್ಟಿಗೆ ಶಾಸಕರು, ಜಿಲ್ಲಾಧಿಕಾರಿ ಮುಂತಾದವರನ್ನು ಒಳಗೊಂಡ ಸಮಿತಿಯ ಒಪ್ಪಿಗೆ ಕಡ್ಡಾಯವಾಗಲಿರುವುದರಿಂದ, ಈ ಸಮಿತಿ ತನ್ನ ಉದ್ದೇಶಕ್ಕೆ ಪೂರಕವಾಗಿ ಸಾಮಾಜಿಕ ಬದ್ಧತೆಯನ್ನು ಮೈಗೂಡಿಸಿಕೊಂಡರೆ ಯೋಜನೆಗೆ ಅರ್ಥ ಬರುತ್ತದೆ. ಇಲ್ಲವಾದರೆ ಕೋಟೆ ಕಾಯಲು ಮತ್ಯಾರನ್ನೋ ನೇಮಿಸಿದಂತೆ ಆಗುತ್ತದೆ.ಅಶ್ವತ್ಥ ಕಲ್ಲೇದೇವರಹಳ್ಳಿ, ಕಡೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT