ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಹುಳುಕು ಹೊರಬೀಳುವ ಅಂಜಿಕೆಯೇ?

Last Updated 7 ಸೆಪ್ಟೆಂಬರ್ 2022, 19:31 IST
ಅಕ್ಷರ ಗಾತ್ರ

ವಿಧಾನಸಭೆ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ‘ಬಿಜೆಪಿ ನೇತೃತ್ವದ ಸರ್ಕಾರವು 40 ಪರ್ಸೆಂಟ್‌ ಕಮಿಷನ್ ಸರ್ಕಾರ’ ಎಂದು ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆ ಪ್ರತಿಯಾಗಿ ಆಡಳಿತ ಪಕ್ಷದ ಸಚಿವರು ‘ಸಿದ್ದರಾಮಯ್ಯ ನೇತೃತ್ವದ ಸರ್ಕಾರದ ಸಮಯದಲ್ಲಿ ಭ್ರಷ್ಟಾಚಾರ ನಡೆದೇ ಇರಲಿಲ್ಲವೆ’ ಎಂದು ಕುಟುಕಿದ್ದಾರೆ. ಇದು ಒಂದು ರೀತಿಯಲ್ಲಿ ‘ನೀನು ಹೊಡೆದಂಗೆ ಮಾಡು, ನಾನು ಅತ್ತಂಗೆ ಮಾಡುತ್ತೇನೆ’ ಎನ್ನುವ ಹಾಗಿದೆ. ಇವರದೇ ಬಹುಮತದ ಸರ್ಕಾರವಿದ್ದೂ, ಹಿಂದಿನ ಸರ್ಕಾರದಲ್ಲಿ ನಡೆದಿದೆ ಎನ್ನಲಾದ ಭ್ರಷ್ಟಾಚಾರದ ಆರೋಪಗಳ ಬಗ್ಗೆ ತನಿಖೆ ಮಾಡುವ ತಾಕತ್ತು ಇಲ್ಲವೇ? ಹಾಗೆ ಮಾಡಿದರೆ ಇವರ ಹುಳುಕು ಹೊರಬೀಳುತ್ತದೆ
ಎಂಬ ಅಂಜಿಕೆಯೇ?

-ಅನಂತ ಪದ್ಮನಾಭ ಎಚ್.ಎಮ್.,ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT