<p>ಲಾಕ್ಡೌನ್ ಕಾರಣಕ್ಕೆ ದೇಶದಾದ್ಯಂತ ನ್ಯಾಯಾಲಯಗಳ ಕಲಾಪಗಳು ನಿಂತುಹೋಗಿವೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳಲ್ಲಿ ಮಾತ್ರ ವಿಡಿಯೊ ಕಾನ್ಫರೆನ್ಸ್ ಮೂಲಕ ಕ್ರಿಮಿನಲ್ ಪ್ರಕರಣಗಳಲ್ಲಿ ಕೆಲವು ಜಾಮೀನು ಅರ್ಜಿ, ಸಾರ್ವಜನಿಕ ಹಿತಾ<br />ಸಕ್ತಿ ಅರ್ಜಿಗಳು ವಿಚಾರಣೆಗೆ ಬಂದಿವೆ. ಬಹುತೇಕ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ನ್ಯಾಯಾಲಯಗಳಲ್ಲಿ ಅತ್ಯಂತ ತುರ್ತು ಎಂದು ಭಾವಿಸಲಾದ ಪ್ರಕರಣಗಳನ್ನು ಮಾತ್ರ ವಿಚಾರಣೆಗೆ ಆಯ್ದುಕೊಳ್ಳಲಾಗುತ್ತಿದೆ.</p>.<p>ಲಾಕ್ಡೌನ್ ನಂತರವೂ ವಾರದಲ್ಲಿ ಒಂದೆರಡು ದಿನವಾದರೂ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಕಲಾಪಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಸಬೇಕು. ಭೌತಿಕವಾಗಿ ಹಾಜರಾತಿ ಬಯಸದ ಲಕ್ಷಾಂತರ ಪ್ರಕರಣಗಳಿವೆ. ಈ ಪ್ರಕರಣಗಳಲ್ಲಿ, ದೂರದ ಊರುಗಳಲ್ಲಿ ಕುಳಿತೇ ಬಾಧಿತರು, ಕಕ್ಷಿದಾರರು ಮತ್ತು ವಕೀಲರು ನ್ಯಾಯಾಲಯದ ಕಲಾಪಗಳಲ್ಲಿ ತೊಡಗಿಸಿಕೊಳ್ಳಬಹುದು. ತಂತ್ರಜ್ಞಾನದ ಸೌಲಭ್ಯಗಳನ್ನು ಬಳಸಿಕೊಂಡು ಮಂದಿಯ ಬವಣೆ ನೀಗಿಸುವ ನಿಟ್ಟಿನಲ್ಲಿ ನ್ಯಾಯಾಂಗ ವ್ಯವಸ್ಥೆ ಹೆಜ್ಜೆ ಇರಿಸಿದರೆ, ನ್ಯಾಯ ವಿತರಣೆಯನ್ನು ಹೆಚ್ಚು ಜನಪರಗೊಳಿಸಲು ಸಾಧ್ಯ.</p>.<p><strong>– ಕೆ.ಬಿ.ಕೆ.ಸ್ವಾಮಿ, ನಾಗರಾಜ್ ಬಿ. ಗಡೇಕರ್,ಬೆಂಗಳೂರು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಲಾಕ್ಡೌನ್ ಕಾರಣಕ್ಕೆ ದೇಶದಾದ್ಯಂತ ನ್ಯಾಯಾಲಯಗಳ ಕಲಾಪಗಳು ನಿಂತುಹೋಗಿವೆ. ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ಗಳಲ್ಲಿ ಮಾತ್ರ ವಿಡಿಯೊ ಕಾನ್ಫರೆನ್ಸ್ ಮೂಲಕ ಕ್ರಿಮಿನಲ್ ಪ್ರಕರಣಗಳಲ್ಲಿ ಕೆಲವು ಜಾಮೀನು ಅರ್ಜಿ, ಸಾರ್ವಜನಿಕ ಹಿತಾ<br />ಸಕ್ತಿ ಅರ್ಜಿಗಳು ವಿಚಾರಣೆಗೆ ಬಂದಿವೆ. ಬಹುತೇಕ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ನ್ಯಾಯಾಲಯಗಳಲ್ಲಿ ಅತ್ಯಂತ ತುರ್ತು ಎಂದು ಭಾವಿಸಲಾದ ಪ್ರಕರಣಗಳನ್ನು ಮಾತ್ರ ವಿಚಾರಣೆಗೆ ಆಯ್ದುಕೊಳ್ಳಲಾಗುತ್ತಿದೆ.</p>.<p>ಲಾಕ್ಡೌನ್ ನಂತರವೂ ವಾರದಲ್ಲಿ ಒಂದೆರಡು ದಿನವಾದರೂ ಸುಪ್ರೀಂ ಕೋರ್ಟ್ ಮತ್ತು ಹೈಕೋರ್ಟ್ ಕಲಾಪಗಳನ್ನು ವಿಡಿಯೊ ಕಾನ್ಫರೆನ್ಸ್ ಮೂಲಕ ನಡೆಸಬೇಕು. ಭೌತಿಕವಾಗಿ ಹಾಜರಾತಿ ಬಯಸದ ಲಕ್ಷಾಂತರ ಪ್ರಕರಣಗಳಿವೆ. ಈ ಪ್ರಕರಣಗಳಲ್ಲಿ, ದೂರದ ಊರುಗಳಲ್ಲಿ ಕುಳಿತೇ ಬಾಧಿತರು, ಕಕ್ಷಿದಾರರು ಮತ್ತು ವಕೀಲರು ನ್ಯಾಯಾಲಯದ ಕಲಾಪಗಳಲ್ಲಿ ತೊಡಗಿಸಿಕೊಳ್ಳಬಹುದು. ತಂತ್ರಜ್ಞಾನದ ಸೌಲಭ್ಯಗಳನ್ನು ಬಳಸಿಕೊಂಡು ಮಂದಿಯ ಬವಣೆ ನೀಗಿಸುವ ನಿಟ್ಟಿನಲ್ಲಿ ನ್ಯಾಯಾಂಗ ವ್ಯವಸ್ಥೆ ಹೆಜ್ಜೆ ಇರಿಸಿದರೆ, ನ್ಯಾಯ ವಿತರಣೆಯನ್ನು ಹೆಚ್ಚು ಜನಪರಗೊಳಿಸಲು ಸಾಧ್ಯ.</p>.<p><strong>– ಕೆ.ಬಿ.ಕೆ.ಸ್ವಾಮಿ, ನಾಗರಾಜ್ ಬಿ. ಗಡೇಕರ್,ಬೆಂಗಳೂರು</strong></p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>