ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್ ಗಿರಿನಾಥ್ ಅವರು ಅನಾರೋಗ್ಯದಿಂದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ. ರಾಜಕಾರಣಿಗಳಿಗೂ ಅಧಿಕಾರಿಗಳಿಗೂ ಸರ್ಕಾರಿ ಆಸ್ಪತ್ರೆಯೆಂದರೆ ಅಪಥ್ಯವೇಕೆ? ಸರ್ಕಾರಿ ಆಸ್ಪತ್ರೆಗಳಲ್ಲಿ ಸರಿಯಾದ ಚಿಕಿತ್ಸೆ ದೊರೆಯುವುದಿಲ್ಲ ಎಂಬ ಭಾವವೇ? ಅದೇ ನಿಜವಾದರೆ ಆ ಕೊರತೆಯನ್ನು ಸರಿಪಡಿಸಬೇಕಾದದ್ದು ಅವರ ಕರ್ತವ್ಯವಲ್ಲವೇ? ಸರ್ಕಾರಿ ಆಸ್ಪತ್ರೆಗಳು ಇರುವುದು ಬಡವರಿಗೆ ಮಾತ್ರವೇ? ಸರಿಯಾದ ಚಿಕಿತ್ಸೆ ದೊರೆಯದೆ ಬಡವರ ಜೀವ ಅಪಾಯಕ್ಕೆ ಸಿಲುಕಬೇಕೆ?