ಲಾಕ್ಡೌನ್ನ ಈ ಸಮಯದಲ್ಲಿ ನಮ್ಮ ರಾಜ್ಯದ ಜನ ನಂಬಿರುವುದು, ಆರೋಗ್ಯ ಸಿಬ್ಬಂದಿಯನ್ನು ಬಿಟ್ಟರೆ ಪೊಲೀಸ್ ಇಲಾಖೆಯನ್ನು. ಕೆಲವು ದಕ್ಷ, ಪ್ರಾಮಾಣಿಕ ಪೊಲೀಸ್ ಅಧಿಕಾರಿಗಳು ಹಗಲಿರುಳೆನ್ನದೇ ಜನರಿಗಾಗಿ, ರಾಜ್ಯಕ್ಕಾಗಿ ಸೇವೆ ಸಲ್ಲಿಸುತ್ತಿದ್ದಾರೆ. ಇಂತಹ ಸಮಯದಲ್ಲಿ ಕೆಲವು ಅಧಿಕಾರಿಗಳು ತಮ್ಮ ಸ್ವಾರ್ಥಕ್ಕಾಗಿ ಮದ್ಯ ಹಾಗೂ ಸಿಗರೇಟ್ ಕಂಪನಿಗಳೊಂದಿಗೆ ಶಾಮೀಲಾಗಿರುವುದು ನಾಚಿಕೆಗೇಡಿನ ಸಂಗತಿ.