ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವಾಚಕ ವಾಣಿ| ಹೀಗಿದೆ ನಮ್ಮ ನಾಯಕರ ಇಚ್ಛಾಶಕ್ತಿ!

Last Updated 28 ನವೆಂಬರ್ 2022, 19:30 IST
ಅಕ್ಷರ ಗಾತ್ರ

ಕರ್ನಾಟಕ ಹಾಗೂ ಮಹಾರಾಷ್ಟ್ರ ಗಡಿ ವಿವಾದ ಇದೀಗ ಮತ್ತೆ ಮುನ್ನೆಲೆಗೆ ಬಂದಿದೆ. ಈ ಸಂದರ್ಭದಲ್ಲಿ, ‘25 ವರ್ಷಗಳ ಹಿಂದೆ’ ಅಂಕಣ (ಪ್ರ.ವಾ., ನ. 26) ಗಮನ ಸೆಳೆಯುವಂತಿದೆ. ಅಂದು ಕರ್ನಾಟಕದ ಮುಖ್ಯಮಂತ್ರಿ
ಯಾಗಿದ್ದ ಜೆ.ಎಚ್.ಪಟೇಲ್ ಹಾಗೂ ಮಹಾರಾಷ್ಟ್ರದ ಮುಖ್ಯಮಂತ್ರಿಯಾಗಿದ್ದ ಮನೋಹರ ಜೋಷಿ ಅವರು ಮುಂಬೈನಲ್ಲಿ ಜಂಟಿ ಪತ್ರಿಕಾಗೋಷ್ಠಿ ನಡೆಸಿ, ಆಗಿನ ಕಾಲಕ್ಕೆ ನಾಲ್ಕು ದಶಕಗಳಷ್ಟು ಹಿಂದಿನದಾಗಿದ್ದ ಗಡಿ ವಿವಾದವನ್ನು ಮಾತುಕತೆಯ ಮೂಲಕ ಶೀಘ್ರವಾಗಿ ಪರಿಹರಿಸಿಕೊಳ್ಳಬೇಕೆಂಬ ಇಂಗಿತವನ್ನು ವ್ಯಕ್ತಪಡಿಸಿದ್ದರು. ಹೇಗಿದೆ ನೋಡಿ ಸಮಸ್ಯೆ ಪರಿಹರಿಸುವಲ್ಲಿ ರಾಜಕೀಯ ನಾಯಕರ ಇಚ್ಛಾಶಕ್ತಿ!

- ಎ.ವಿ.ಮುರಳೀಧರ ಆಚಾರ್ಯ,ಬೆಂಗಳೂರು

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT